Kannada Beatz
News

ಶೀರ್ಷಿಕೆ ಅನಾವರಣ ಮಾಡಿ “ಬೆಸ್ಟಿ” ಚಿತ್ರಕ್ಕೆ ಬೆಸ್ಟ್ ವಿಶಸ್ ಹೇಳಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ .

“ಕೇದರನಾಥ ಕುರಿಫಾರಂ” ನಿರ್ದೇಶಕ ಶ್ರೀನಿವಾಸ್ ಈ ಚಿತ್ರದ ಮೂಲಕ ನಿರ್ಮಾಪಕ .

ಹೊಸತಂಡದ ಹೊಸಪ್ರಯತ್ನಕ್ಕೆ ಸದಾ ಬೆನ್ನು ತಟ್ಟಿ ಪ್ರೋತ್ಸಾಹ ನೀಡುವ ಕಾರ್ಯವನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಯಾವಾಗಲೂ ಮಾಡುತ್ತಾ ಬರುತ್ತಿದ್ದಾರೆ‌. ಇತ್ತೀಚೆಗೆ ಗಗನ್ ಸಾನಿಧ್ಯ ಲಾಂಛನದಲ್ಲಿ, ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರ ಅಶೀರ್ವಾದದೊಂದಿಗೆ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಸಹಕಾರದೊಂದಿಗೆ ಶ್ರೀನಿವಾಸ್, ಮಮತ ಶ್ರೀನಿವಾಸ್, ಸೋಮಶೇಖರ್ ಹಾಗೂ ಕೆ.ಎಂ.ನಟರಾಜ್ ಅವರು ನಿರ್ಮಿಸುತ್ತಿರುವ ನೂತನ‌ ಚಿತ್ರದ ಶೀರ್ಷಿಕೆಯನ್ನು ಶಿವರಾಜಕುಮಾರ್ ಅವರು ಸ್ವತಃ ತಾವೇ ಶೀರ್ಷಿಕೆ ಹೆಸರನ್ನು ಬರೆಯುವ ಮೂಲಕ ಅನಾವರಣ ಮಾಡಿದ್ದಾರೆ.

ಈ ನೂತನ ಚಿತ್ರಕ್ಕೆ “ಬೆಸ್ಟಿ” ಎಂದು ಹೆಸರಿಡಲಾಗಿದೆ‌. ಶೀರ್ಷಿಕೆ ಅನಾವರಣ ಮಾಡಿದ ಶಿವರಾಜಕುಮಾರ್ ಅವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. “45” ಚಿತ್ರದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿರುವ ಆರ್ಯ ಯೋಗೀಶ್ “ಬೆಸ್ಟಿ” ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಶೋಯಬ್ (ಹೈದರಾಬಾದ್) ಛಾಯಾಗ್ರಹಣ, ಸನ್ನಿ ಅವರ ಸಂಗೀತ ನಿರ್ದೇಶನ, ಶಿವಕಾಂತ್ ಕಲಾ ನಿರ್ದೇಶನ, ಹಾಗೂ ಸೂರಿ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ನಾಯಕರಾಗಿ ಚೇತನ್ ಗೌಡ ನರೆಹಳ್ಳಿ ಹಾಗೂ ಸಾತ್ವಿಕ್ ವೆಂಕಟೇಶ್ ಅಭಿನಯಿಸುತ್ತಿದ್ದಾರೆ. ಕರಿ ಸುಬ್ಬು, ಟೆನ್ನಿಸ್ ಕೃಷ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ‌. ನಾಯಕಿಯ ಆಯ್ಕೆ ನಡೆಯುತ್ತಿದೆ.

ನಾನು ಕಳೆದವರ್ಷ ತೆರೆಕಂಡ “ಕೇದರನಾಥ ಕುರಿಫಾರಂ” ಚಿತ್ರವನ್ನು ನಿರ್ದೇಶನ ಮಾಡಿದ್ದೆ. ಸ್ನೇಹಿತ ಆರ್ಯ ಯೋಗೇಶ್ ಹೇಳಿದ “ಬೆಸ್ಟಿ” ಚಿತ್ರದ ಕಥೆ ಬಹಳ ಇಷ್ಟವಾಯಿತು. ಹಾಗಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದೇನೆ. “ಬೆಸ್ಟಿ” ಒಂದು ಬೆಸ್ಟ್ ಪ್ರೇಮಕಥಾನಕವಾಗಿದೆ. ಜೊತೆಗೆ ಈಗಿನ ಯುವಜನತೆ ಅಧುನಿಕ ತಂತ್ರಜ್ಞಾನಗಳಿಂದ ಹೇಗೆಲ್ಲಾ ಮೋಸ ಹೋಗುತ್ತಾರೆ ಎಂಬ ವಿಷಯವನ್ನು ಈ ಚಿತ್ರದಲ್ಲಿ ನಿರ್ದೇಶಕರು ತೋರಿಸುತ್ತಿದ್ದಾರೆ. ಗಣೇಶನ ಹಬ್ಬದ ನಂತರ ಚಿತ್ರೀಕರಣ ಪ್ರಾರಂಭ ಮಾಡುತ್ತೇವೆ. ಶೀರ್ಷಿಕೆ ಅನಾವರಣ ಮಾಡಿಕೊಟ್ಟು ನಮಗೆ ಪ್ರೋತ್ಸಾಹ ನೀಡಿದ ಶಿವರಾಜಕುಮಾರ್ ಅವರಿಗೆ ಅನಂತ ಧನ್ಯವಾದಗಳು ಎನ್ನುತ್ತಾರೆ ನಿರ್ಮಾಪಕ ಶ್ರೀನಿವಾಸ್(ಶೀನು ಸಾಗರ).

Related posts

ಕ್ರೇಜಿಸ್ಟಾರ್ ಸುಪುತ್ರನ ಎರಡನೇ ಕನಸಿಗೆ ಶೀರ್ಷಿಕೆ ಫಿಕ್ಸ್..’ಮುಧೋಳ್’ ಜೊತೆ ಬಂದ ವಿಕ್ರಮ್ ರವಿಚಂದ್ರನ್..
ವಿಕ್ರಮ್ ರವಿಚಂದ್ರನ್ ಎರಡನೇ ಸಿನಿಮಾಗೆ ‘ಮುಧೋಳ್’ ಶೀರ್ಷಿಕೆ ಫಿಕ್ಸ್..ಗ್ಯಾಂಗ್ ಸ್ಟರ್ ಅವತಾರದಲ್ಲಿ ಕ್ರೇಜಿಸ್ಟಾರ್ ಪುತ್ರ

Kannada Beatz

ವಿನಯ್ ರಾಜ್ ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಪೋಸ್ಟರ್ ರಿಲೀಸ್

Kannada Beatz

ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಮಂಜುಳಾ ಗುರುರಾಜ್ ಅವರ ಸಾಧನಾ ಸಂಗೀತ ಶಾಲೆಗೆ 30 ವರ್ಷತುಂಬಿದ ಹರ್ಷ,

administrator

Leave a Comment

Share via
Copy link
Powered by Social Snap