Kannada Beatz
News

ಬ್ಯೂಟಿಫುಲ್‌ ಮ್ಯೂಸಿಕಲ್ ಲವ್ ಸ್ಟೋರಿ “ರೇಮೊ” ನವೆಂಬರ್ 25ರಂದು ಬಿಡುಗಡೆ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ
ಸಿ.ಆರ್. ಮನೋಹರ್ ಅವರ ನಿರ್ಮಾಣದ , ಉತ್ತಮ ಪ್ರೇಮಕಥೆಯುಳ್ಳ ಚಿತ್ರಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ನಿರ್ದೇಶನದ ಹಾಗೂ ಸುರದ್ರೂಪಿ ನಟ ಇಶಾನ್ – ಚೆಲುವೆ ಆಶಿಕಾ ರಂಗನಾಥ್ ನಾಯಕ-ನಾಯಕಿಯಾಗಿ ನಟಿಸಿರುವ, ಬ್ಯೂಟಿಫುಲ್‌ ಮ್ಯೂಸಿಕಲ್ ಲವ್ ಸ್ಟೋರಿ “ರೇಮೊ” ನವೆಂಬರ್ 25 ರಂದು ಬಿಡುಗಡೆಯಾಗಲಿದೆ. ಸಿ.ಆರ್.ಗೋಪಿ ಈ ಚಿತ್ರದ ಸಹ ನಿರ್ಮಾಪಕರು.

ನಾನು ಮೊದಲ ಬಾರಿ ಇಶಾನ್ ಅವರನ್ನು ಭೇಟಿ ಮಾಡಿದ್ದು ದುಬೈನಲ್ಲಿ. ಇಷ್ಟು ಚೆನ್ನಾಗಿದ್ದಾರೆ. ಇವರನ್ನು ಹೀರೋ ಮಾಡಬೇಕು ಅಂದು ಕೊಂಡೆ. ನಂತರ “ರೇಮೊ” ಚಿತ್ರದ ಕಥೆ ಬರೆದೆ. 2019ರಲ್ಲಿ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಯಿತು. ಆನಂತರ ಹೈದರಾಬಾದ್, ಜಮ್ಮು-ಕಾಶ್ಮೀರ, ಸೌತ್ ಆಫ್ರಿಕಾ, ಸಿಂಗಾಪುರ ಮುಂತಾದ ಕಡೆ ಚಿತ್ರೀಕರಣ ನಡೆಸಲಾಯಿತು.
ಇದೊಂದು ಮ್ಯೂಸಿಕಲ್ ಲವ್ ಸ್ಟೋರಿ. ಮ್ಯಾಜಿಕಲ್‌ ಕಂಪೋಸರ್ ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಅದ್ಭುತ ಹಾಡುಗಳು ಈ ಚಿತ್ರದಲ್ಲಿದೆ.
ಇಶಾನ್ – ಆಶಿಕಾ ರಂಗನಾಥ್ ಅವರ ಸುಂದರ ಜೋಡಿಯನ್ನು ತೆರೆ ಮೇಲೆ ನೋಡಿದವರು ಫಿದಾ ಆಗುವುದು ಖಂಡಿತಾ. ವೈದಿ ಅವರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ರೇಮೊ” ಚಿತ್ರದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು.


ಸದ್ಯದಲ್ಲೇ ಲಿರಿಕಲ್ ಸಾಂಗ್, ಒಂದು ವಿಡಿಯೋ ಸಾಂಗ್ ಮತ್ತು ಟ್ರೇಲರ್ ಬಿಡುಗಡೆ ಮಾಡುತ್ತೇವೆ.
“ರೇಮೊ” ಚಿತ್ರದಲ್ಲಿ ಪರಿಶುದ್ಧ ಪ್ರೇಮಕಥೆಯೊಂದಿಗೆ ಭಾವನಾತ್ಮಕ ಸನ್ನಿವೇಶಗಳು ನೋಡುಗರ ಮನಸ್ಸಿಗೆ ಹತ್ತಿರವಾಗಲಿದೆ. ನವೆಂಬರ್ 25 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ತೆರೆಯ ಮೇಲೆ ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ನೀವೆಲ್ಲರು ನೋಡಿ ಹರಿಸಿ ಎನ್ನುತ್ತಾರೆ ನಿರ್ದೇಶಕ ಪವನ್ ಒಡೆಯರ್.

Related posts

‘ಖಾಸಗಿ ಪುಟ’ದಲ್ಲಿ ಅನಾವರಣವಾಯ್ತು ಮನಮುಟ್ಟುವ ಪ್ರೇಮಕಥೆ…ಹೊಸಬರ ಹೊಸ ಪ್ರಯತ್ನದ ‘ಖಾಸಗಿ ಪುಟಗಳು’ ಫಸ್ಟ್ ಲುಕ್ ರಿಲೀಸ್!

administrator

ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್.

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

Leave a Comment

Share via
Copy link
Powered by Social Snap