Kannada Beatz
News

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾಣ” ಚಿತ್ರದ ಆಕ್ಷನ್ ಟ್ರೇಲರ್ ಬಿಡುಗಡೆ.

ಸುಂದರ ಸಮಾರಂಭದಲ್ಲಿ ಅನೇಕ ಗಣ್ಯರ ಉಪಸ್ಥಿತಿ.

ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ “ರಾಣ” ಚಿತ್ರದ ಆಕ್ಷನ್ ಟ್ರೇಲರ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಬಿಡುಗಡೆಯಾಗಿದೆ.

ಶ್ರೇಯಸ್ ನನ್ನ ಆತ್ಮೀಯ ಗೆಳೆಯ. ಈ ಚಿತ್ರಕ್ಕಾಗಿ ಆತ ಪಟ್ಟಿರುವ ಶ್ರಮ ಟ್ರೀಲರ್ ನಲ್ಲಿ ಕಾಣುತ್ತಿದೆ‌‌. ಉತ್ತಮ ತಂತ್ರಜ್ಞರ ಹಾಗೂ ಕಲಾವಿದರ ಸಂಗಮದಲ್ಲಿ, ಕೆ.ಮಂಜು ಅವರ ಸಾರಥ್ಯದಲ್ಲಿ ಈ ಚಿತ್ರ ಚೆನ್ನಾಗಿ ಬಂದಿದೆ. ನಾನು ಮೊದಲ ದಿನ ನೋಡುತ್ತೇನೆ. ನೀವು ನೋಡಿ ಎಂದರು ಧ್ರುವ ಸರ್ಜಾ.

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಸಹ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಸಿನಿಮಾ ನನ್ನ ಉಸಿರು. ಮೂರುವರೆ ವರ್ಷಗಳ(ಪಡ್ಡೆ ಹುಲಿ) ನಂತರ ನನ್ನ ಅಭಿನಯದ “ರಾಣ” ಸಿನಿಮಾ ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ಈ ದಿನಕ್ಕಾಗಿ ನಾನು ಕಾಯುತ್ತಿದೆ ಎಂದು ಶ್ರೇಯಸ್ ಭಾವುಕರಾದರು. ಟ್ರೇಲರ್ ಬಿಡುಗಡೆ ‌ಮಾಡಿ ಪ್ರೋತ್ಸಾಹ ನೀಡಿದ ಧ್ರುವ ಸರ್ಜಾ ಅವರಿಗೆ ಹಾಗೂ ಆಗಮಿಸಿದ ಗಣ್ಯರಿಗೆ ಶ್ರೇಯಸ್ ಧನ್ಯವಾದ ತಿಳಿಸಿದರು.

ಅವಕಾಶ ನೀಡಿದ್ದ ಕೆ.ಮಂಜು ಹಾಗೂ ಪುರುಷೋತ್ತಮ್ ಅವರಿಗೆ ಧನ್ಯವಾದ. ಚಿತ್ರ ಚೆನ್ನಾಗಿ ಬಂದಿದೆ ಎಂದರೆ ಆ ಕೀರ್ತಿ ನನ್ನ ಇಡೀ ತಂಡಕ್ಕೆ ಸೇರಬೇಕು. ಚಿತ್ರ ಆರಂಭದಿಂದ ಸಪೋರ್ಟ್ ಮಾಡುತ್ತಿರುವ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ನಂದಕಿಶೋರ್.

“ಏಕ್ ಲವ್ ಯಾ” ಚಿತ್ರದ ನಂತರ “ರಾಣ” ಚಿತ್ರದಲ್ಲಿ ನಟಿಸಿದ್ದೇನೆ. ಈ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕಿ ರೀಷ್ಮಾ ನಾಣಯ್ಯ. ರಜನಿ ಭಾರದ್ವಾಜ್, ರಘು, ಮೋಹನ್ ಧನರಾಜ್ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಸಂಗೀತ ನಿರ್ದೇಶನದೊಂದಿಗೆ ಈ ಚಿತ್ರಕ್ಕೆ ರೀರೆಕಾರ್ಡಿಂಗ್ ಸಹ ಮಾಡಿರುವುದಾಗಿ ಚಂದನ್ ಶೆಟ್ಟಿ ತಿಳಿಸಿದರು. ಛಾಯಾಗ್ರಾಹಕ ಶೇಖರ್ ಚಂದ್ರ ಸಹ “ರಾಣ” ಕುರಿತು ಮಾತನಾಡಿದರು.

ನಿಜವಾಗಲೂ “ರಾಣ” ಚಿತ್ರ ಚೆನ್ನಾಗಿದೆ‌.‌ 11.11.22 ಒಳ್ಳೆಯ ದಿನ ಈ ಚಿತ್ರ ಬಿಡುಗಡೆಯಾಗುತ್ತಿದೆ. ನನ್ನ ಮಗ ಸೇರಿದಂತೆ ಈಗ ಬರುತ್ತಿರುವ ಯವ ನಟರಿಗೆ ಒಳ್ಳೆಯ ಭವಿಷ್ಯವಿದೆ ಎಂದರು ಕೆ.ಮಂಜು.

ಕೆ.ಮಂಜು ಅವರ ಸಾರಥ್ಯದಲ್ಲಿ ಹಾಗೂ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ನೋಡಿ ಹರಿಸಿ ಎಂದು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್ ಹೇಳಿದರು.

ನಿರ್ಮಾಪಕರಾದ ಕೆ.ಸಿ.ಎನ್ ಕುಮಾರ್, ಸೂರಪ್ಪ ಬಾಬು, ರಮೇಶ್ ರೆಡ್ಡಿ, ಚೇತನ್ ಗೌಡ, ಕಡ್ಡಿಪುಡಿ ಚಂದ್ರು, ರೈತ ಕೇಶವ್ ಮತ್ತು ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು “ರಾಣ” ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.

Related posts

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

“ಫಾದರ್ಸ್ ಡೇ” ದಿನದಂದು ಬಿಡುಗಡೆಯಾಯಿತು ತಂದೆ – ಮಗನ ಬಾಂಧವ್ಯದ “ಫಾದರ್ಸ್ ಡೇ” ಚಿತ್ರದ ಟ್ರೇಲರ್ ..

Kannada Beatz

‘ಚಿಕ್ಕಿಯ ಮೂಗುತಿ’ ಚಿತ್ರದ ಪವರ್ ಫುಲ್ ಟೀಸರ್ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪತ್ನಿ ಅಶ್ವಿನಿ ಪುನೀತ್

Kannada Beatz

Leave a Comment

Share via
Copy link
Powered by Social Snap