Kannada Beatz
News

ಪವನ್ ಒಡೆಯರ್ ಮತ್ತೊಂದು ‘ಗೂಗ್ಲಿ’…ಡೊಳ್ಳು ಡೈರೆಕ್ಟರ್ ಜೊತೆ ಮತ್ತೆ ಕೈ ಜೋಡಿಸಿದ ರಣವಿಕ್ರಮ ಡೈರೆಕ್ಟರ್..

ಮತ್ತೆ ಒಂದಾದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್….ಡೊಳ್ಳು ತಂಡದ ಪ್ರಯತ್ನ ಇದು

ಮತ್ತೆ ಒಂದಾಗ್ತಿದೆ ಡೊಳ್ಳು ಜೋಡಿ..ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಹೊಸ ಚಿತ್ರ..

ಡೊಳ್ಳು ಬಾರಿಸಿದ ಪವನ್ ಒಡೆಯರ್ ಮತ್ತೊಂದು ಗೂಗ್ಲಿಗೆ ಸಜ್ಜಾಗಿದ್ದಾರೆ. ಅರ್ಥಾತ್ ಪವನ್ ಒಡೆಯರ್ ತಮ್ಮದೇ ಒಡೆಯರ್ ಮೂವೀಸ್ ಬ್ಯಾನರ್ ನಡಿಯಲ್ಲಿ ಚೊಚ್ಚಲ ಬಾರಿಗೆ ನಿರ್ಮಾಣದ ಮಾಡಿದ್ದ ಡೊಳ್ಳು ಎಲ್ಲೆಡೆ ಮಾರ್ಧನಿಸಿತ್ತು. ಪ್ರಶಸ್ತಿಗಳ ಬೇಟೆಯಾಡಿತ್ತು. ರಾಷ್ಟ್ರಪ್ರಶಸ್ತಿಯಿಂದ ಹಿಡಿದು ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ಕರ್ನಾಟಕದ ಜನಪದ ಕಲೆ ಡೊಳ್ಳುಗೆ ಕೈಗನ್ನಡಿ ಹಿಡಿದ್ದ ಈ ಚಿತ್ರಕ್ಕೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳಿದ್ದರು. 2021 ರಲ್ಲಿ ಬಿಡುಗಡೆಯಾದ ಡೊಳ್ಳು ಸಿನಿಮಾ ಸಂಪ್ರದಾಯವನ್ನು ಪುನರುಜ್ಜೀವನಗೊಳಸಿ, ಸಾಂಸ್ಕೃತಿಕ ವೈವಿಧ್ಯತೆಯ ಮೇಲೆ ಬೆಳಕು ಚೆಲ್ಲಿತ್ತು. ಈ ಚಿತ್ರದ ಬಗ್ಗೆ ಇಷ್ಟೆಲ್ಲಾ ವಿವರ ಹೇಳೋದಿಕ್ಕೆ ಕಾರಣ ಈ ಜೋಡಿ ಮತ್ತೆ ಒಂದಾಗುತ್ತಿದೆ.

ಡೊಳ್ಳು ಜೋಡಿ ಈಗ ಮತ್ತೊಂದು ಚಿತ್ರಕ್ಕಾಗಿ ಸಜ್ಜಾಗಿದೆ. ಒಡೆಯರ್ ಮೂವೀಸ್ ಬ್ಯಾನರ್ ಮೂರನೇ ಕಾಣಿಕೆಯಾಗಲಿರುವ ಈ ಚಿತ್ರವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಲಿದ್ದಾರೆ. ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾ. ಉತ್ತರ ಕರ್ನಾಟಕದ ಕಥೆಯಾದ್ರೂ ಅದು ದೇಶ ಎಲ್ಲಾ ಸುತ್ತಲಿದೆ. ಇದೊಂದು ಹೊಸ ಬಗೆಯ ಕಮರ್ಷಿಯಲ್ ಸಿನಿಮಾ ಅಂತಾರೇ ನಿರ್ಮಾಪಕ ಪವನ್ ಒಡೆಯರ್..

ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ಹಣ ಹಾಕುತ್ತಿರುವ ಈ ಚಿತ್ರಕ್ಕೆ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ. ಸದ್ಯ ಪ್ರೀ ಪ್ರೊಡಕ್ಷನ್ ಹಂತದಲ್ಲಿರುವ ಸಿನಿಮಾದ ಟೈಟಲ್ ಶೀಘ್ರದಲ್ಲೇ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಮತ್ತೊಂದೆಡೆ, ಪವನ್ ಒಡೆಯರ್ ತಮ್ಮ ಚೊಚ್ಚಲ ನಿರ್ದೇಶನದ ಮೂಲಕ ಬಾಲಿವುಡ್ಗೆ ಕಾಲಿಟ್ಟಿದ್ದಾರೆ. ಅವಸ್ಥಿ ವರ್ಸಸ್ ಅವಸ್ಥಿ ಚಿತ್ರದಲ್ಲಿ ಪರಂಬ್ರತ ಚಟರ್ಜಿ ನಟಿಸಿದ್ದಾರೆ ಮತ್ತು ಗೀತಾ ಬಾಸ್ರಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಕೋರ್ಟ್ ರೂಮ್ ಡ್ರಾಮ್ ಕಥೆ ಕೂಡ ಇದೆ. ಆದರೆ ಅದರ ಹೊರತಾಗಿ ಇಲ್ಲಿ ಬೇರೆ ಬೇರೆ ವಿಚಾರವೂ ಇದೆ ಎಂದು ಹೇಳುವ ಡೈರೆಕ್ಟರ್ ಪವನ್ ಒಡೆಯರ್ ಸದ್ಯ, ಚಿತ್ರದ ಪೊಸ್ಟ್ ಪ್ರೋಡಕ್ಷನ್ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಪವನ್ ಒಡೆಯರ್ ಈ ಸಿನಿಮಾ ಮೂಲಕ ಬಾಲಿವುಡ್ನಲ್ಲೂ ಹೊಸದೊಂದು ಅಲೆ ಎಬ್ಬಿಸೋ ಹಾಗೆ ಕಾಣುತ್ತಿದೆ. ಸಿನಿಮಾದಲ್ಲಿ ಅದ್ಭುತ ಕಥೆ ಕೂಡ ಇದ್ದು, ಅದ್ಭುತ ಕಲಾವಿದರ ಸಿನಿಮಾ ಇದಾಗಿದೆ.

Related posts

ಈ ವಾರ ತೆರೆಗೆ ಬರುತ್ತಿದೆ ಹೊಸತಂಡದ ಹೊಸಪ್ರಯತ್ನ “ಮಾಂಕ್ ದಿ ಯಂಗ್” .

Kannada Beatz

ಎಬಿ ಪಾಸಿಟಿವ್’ ಸಿನಿಮಾದ ಮೆಲೋಡಿ ಸಾಂಗ್ ಗೆ ನಾಗೇಂದ್ರ ಪ್ರಸಾದ್ ಹಾಗೂ ಅನೀರುದ್ಧ ಶಾಸ್ತ್ರಿ ಸಾತ್

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

Leave a Comment

Share via
Copy link
Powered by Social Snap