Kannada Beatz
News

ಸಿರಿ ವೈ.ಎಸ್.ಆರ್. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಯುಗಾದಿ ಹಬ್ಬಕ್ಕಾಗಿ ವಿಶೇಷ

ವಿ.ನಾಗೇಂದ್ರಪ್ರಸಾದ್ ವಿರಚಿತ ಯುಗಗಳ ಆದಿ ಯುಗಾದಿ ಹಾಡಿನ ಲಿರಿಕಲ್ ವಿಡಿಯೋ… ಹಿರಿಯಸಾಹಿತಿ, ನಿರ್ದೇಶಕ ಡಾ.ವಿ. ನಾಗೇಂದ್ರಪ್ರಸಾದ್ ಅವರು ಒಬ್ಬ ಪರಿಸರ ಪ್ರೇಮಿಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ 'ಕೃಷ್ಣಾವತಾರ'

ಹಾಡೊಂದನ್ನು ಡಾ.ವಿ. ನಾಗೇಂದ್ರಪ್ರಸಾದ್ ಅವರು ಬರೆದಿದ್ದಾರೆ. ‘ಯಗಗಳ ಆದಿ ಯುಗಾದಿ’ ಎಂಬ ಯುಗಾದಿ ಮಹತ್ವ ಸಾರುವ ಸಾಹಿತ್ಯ ಒಳಗೊಂಡ ಈ ಲಿರಿಕಲ್ ವಿಡಿಯೋ ಹಾಡನ್ನು ಮೈಸೂರು ಮಹಾರಾಜರಾದ
ಯದುವೀರ್ ಒಡೆಯರ್ ಅವರು ಬಿಡುಗಡೆ ಮಾಡಿದರು. ಮುಂದಿನ ದಿನಗಳಲ್ಲಿ ಇದು ಯುಗಾದಿ ಹಬ್ಬದ ಖಾಯಂ ಹಾಡಾಗುವಂಥ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸಿವೆ. ಅಷ್ಟೊಂದು ಪರಿಣಾಮಕಾರಿಯಾದ ಸಾಹಿತ್ಯ, ರಾಗಸಂಯೋಜನೆ ಈ ಹಾಡಿನಲ್ಲಿದೆ. ಮ್ಯೂಸಿಕ್ ಬಜಾರ್ ಯು ಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.
ಮಾಯಾಬಜಾರ್ ಫಿಲಂಸ್ ಬ್ಯಾನರ್ ಅಡಿ ಗುರುಪ್ರಸಾದ್ ಕೆ. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶುಭ ರಕ್ಷಾ, ತ್ರಿವೇಣಿ ರಾಜ್ ಚಿತ್ರದ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ವಿಶ್ವನಾಥ್, ಮಾನಸಿ ಸುಧೀರ್, ರಘು ರಾಮನಕೊಪ್ಪ, ಪ್ರಕಾಶ್ ತುಮ್ಮಿನಾಡ್ ಹಾಗೂ ಇತರರು ಉಳಿದ ತಾರಾಗಣದಲ್ಲಿದ್ದಾರೆ.
ಇನ್ನು ಈ ಚಿತ್ರಕ್ಕೆ ರಾಜ ಶಿವಶಂಕರ್ ಅವರು ಕ್ಯಾಮೆರಾ ವರ್ಕ್ ಮಾಡಿದ್ದು, ಎಬಿಎಂ ಸಂಗೀತ ಸಂಯೋಜನೆ ಮಾಡಿದ್ದಾರೆ.

Related posts

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

Kannada Beatz

‘ಧಮ್ಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬರ್ತಿದ್ದಾರೆ ತೆಲುಗಿನ ಪ್ರತಿಭಾನ್ವಿತ ನಟ ವಿಶ್ವಕ್ ಸೇನ್..ದೀಪಾವಳಿಗೆ ಚಿತ್ರದ ಫಸ್ಟ್ ಲುಕ್ ರಿಲೀಸ್

Kannada Beatz

Leave a Comment

Share via
Copy link
Powered by Social Snap