Kannada Beatz
News

ಹಾಡಿನಲ್ಲೇ ಮೋಡಿ ಮಾಡಿದ “ಲಾಫಿಂಗ್ ಬುದ್ಧ”

ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ, ಭರತ್ ರಾಜ್ ನಿರ್ದೇಶನ ಹಾಗೂ ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಎಂಥಾ ಚಂದಾನೇ” ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿಷ್ಣು ವಿಜಯ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನನ್ನ ಅಭಿನಯದ “ಹೀರೋ” ಚಿತ್ರವನ್ನು ನಿರ್ದೇಶಿಸಿದ್ದ ಭರತ್ ರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅವರು ಈ ಚಿತ್ರದ ಕಥೆ ಹೇಳಿದಾಗ ಮನಸ್ಸಿಗೆ ಹತ್ತಿರವಾಯಿತು. ಪ್ರಮೋದ್ ಶೆಟ್ಟಿ ಅವರನ್ನೇ ಈ ಚಿತ್ರದ ನಾಯಕನನ್ನಾಗಿ ನಾನು ಹಾಗೂ ನಿರ್ದೇಶಕರು ಆಯ್ಕೆ ಮಾಡಿದ್ದೆ‌ವು. ಈಗ ನನ್ನಿಷ್ಟದ ಸಾಹಿತಿಗಳಲ್ಲಿ ಒಬ್ಬರಾದ ಕಲ್ಯಾಣ್ ಅವರು ಬರೆದಿರುವ ಹಾಡು ಬಿಡುಗಡೆಯಾಗಿದೆ. ಆಗಸ್ಟ್ 15 ರಂದು ಟ್ರೇಲರ್ ಬಿಡುಗಡೆಯಾಗಲಿದೆ. ಆಗಸ್ಟ್ 30 ರಂದು ಚಿತ್ರ ತೆರೆಗೆ ಬರಲಿದೆ‌ ಎಂದು ನಿರ್ಮಾಪಕ ರಿಷಭ್ ಶೆಟ್ಟಿ ತಿಳಿಸಿದರು.

ಪೊಲೀಸ್ ಅವರ ಕುಟುಂಬ ಹಾಗು ಅವರ ಭಾವನೆಗಳ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪೇದೆ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತೇಜು ಬೆಳವಾಡಿ ಸತ್ಯವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿಗಂತ್ ಮಂಚಾಲೆ ಅವರ ಪಾತ್ರ ಬಿಡುಗಡೆಯ ತನಕ ಗೌಪ್ಯವಾಗಿರುತ್ತದೆ. ಭದ್ರಾವತಿ ಹಾಗೂ ಸುತ್ತಮುತ್ತಲ್ಲಿನ ಸ್ಥಳದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ‌. ಕೆ.ಎಸ್ ಚಂದ್ರಶೇಖರ್ ಅವರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಅವರ ಸಂಕಲನ‌ ಈ ಚಿತ್ರಕ್ಕಿದೆ. ಚೀನಾ ದೇಶದಲ್ಲಿ ‘ಬುಡೈ’ ಎಂಬುವನ್ನು ಒಂದು ಚೀಲದಲ್ಲಿ ಮಕ್ಕಳಿಗೆ ಬೇಕಾದ ಸಿಹಿ ಪದಾರ್ಥಗಳನ್ನು ತುಂಬಿಕೊಂಡು, ಮಕ್ಕಳನ್ನು ಹಾಗೂ ಎಲ್ಲರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ. ನಮ್ಮ ಚಿತ್ರದ ನಾಯಕ ಗೋವರ್ಧನ ಪಾತ್ರವು ಸಹ ಇದೇ ರೀತಿ. ಹಾಗಾಗಿ “ಲಾಫಿಂಗ್ ಬುದ್ಧ” ಶೀರ್ಷಿಕೆ ಇಟ್ಟಿರುವುದಾಗಿ ನಿರ್ದೇಶಕ ಭರತ್ ರಾಜ್ ತಿಳಿಸಿದರು.

ರಿಷಭ್ ಹಾಗೂ ಭರತ್ ರಾಜ್ ಈ ಚಿತ್ರದ ನಾಯಕ ನಾನೇ ಎಂದಾಗ ನನಗೆ ಆಶ್ಚರ್ಯವಾಯಿತು. ನಂತರ ಕಥೆ ಕೇಳಿ ಈ ಇಷ್ಟವಾಯಿತು. ಈ ಚಿತ್ರಕ್ಕಾಗಿ ನಾನು ತೂಕ ಹೆಚ್ಚಿಸಿಕೊಳ್ಳಬೇಕಾಯಿತು. ನಾನು ದಪ್ಪ ಆದ ತಕ್ಷಣ ಚಿತ್ರೀಕರಣ ಆರಂಭವಾಯಿತು. ಈ ಚಿತ್ರದ ನಂತರ ಇಪ್ಪತ್ಮೂರು ಕೆ‌ಜಿ ತೂಕ ಇಳಿಸಿಕೊಂಡಿದ್ದೇನೆ ಎಂದು ಪ್ರಮೋದ್ ಶೆಟ್ಟಿ ತಿಳಿಸಿದರು.

ರಿಷಭ್ ಶೆಟ್ಟಿ ಅವರು ಮಾಡಬೇಕಿದ್ದ ಪಾತ್ರವನ್ನು ನಾನು ಮಾಡಿದ್ದೇನೆ. ಆದರೆ ಪಾತ್ರದ ಬಗ್ಗೆ ಹೇಳುವ ಹಾಗಿಲ್ಲ ಎಂದರು ದಿಗಂತ್.

ಸತ್ಯವತಿ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕಿ ತೇಜು ಬೆಳವಾಡಿ ಹೇಳಿದರು. ನಿವೃತ್ತ ಪೊಲೀಸ್ ಅಧಿಕಾರಿ ಉಮೇಶ್ ಅವರು ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು. ಹಾಡಿನ ಬಗ್ಗೆ ಕೆ.ಕಲ್ಯಾಣ್ ಮಾತನಾಡಿದರು. ಚಿತ್ರದ ವಿತರಕರಾದ ಕೆ‌.ಆರ್.ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಪತ್ರಿಕಾಗೋಷ್ಠಿಲ್ಲಿದ್ದರು.

Related posts

ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳು

Kannada Beatz

ವಿನಯ್ ಪ್ರೇಮಕಥೆಯ ಮತ್ತೊಂದು ಹಾಡು ಬಿಡುಗಡೆ…ಕೇಳಿ ಸೂಫಿ ಶೈಲಿ ಸರಳ ಗೀತೆ…

Kannada Beatz

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾದ ಫಸ್ಟ್ ಲುಕ್ ರಿಲೀಸ್…ಪ್ರತಿಭಾನ್ವಿತ ಕಲಾವಿದರಿಗೆ ಸಾಥ್ ಕೊಟ್ಟ ಡಾಲಿ ಧನಂಜಯ್

Kannada Beatz

Leave a Comment

Share via
Copy link
Powered by Social Snap