ಹರೀಶ್ ದೇವಿತಂದ್ರೆ ನಿರ್ಮಾಣದ ಈ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ .
![](https://kannadabeatz.com/wp-content/uploads/2024/01/img-20240124-wa00086924855126444375648-723x1024.webp)
ಜನವರಿ 24, ನಾಯಕ ಅಜಯ್ ರಾವ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಹೆಚ್ ಪಿ ಆರ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಹರೀಶ್ ದೇವಿತಂದ್ರೆ ನಿರ್ಮಿಸುತ್ತಿರುವ ಈ ಚೊಚ್ಚಲ ಚಿತ್ರವನ್ನು “ಮಳೆ” ಚಿತ್ರದ ಖ್ಯಾತಿಯ ಶಿವತೇಜಸ್ ನಿರ್ದೇಶಿಸುತ್ತಿದ್ದಾರೆ.
![](https://kannadabeatz.com/wp-content/uploads/2024/01/img-20240124-wa00075397964355874156057-688x1024.webp)
ಈ ಹಿಂದೆ ನಾನು ನಿರ್ದೇಶಿಸಿದ “ಧೈರ್ಯಂ” ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ನಟಿಸಿದ್ದರು ಹಾಗೂ “ದಿಲ್ ಪಸಂದ್” ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. . ಚಿತ್ರದ ಶೀರ್ಷಿಕೆ ಹಾಗೂ ಇತರ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಶಿವತೇಜಸ್ ತಿಳಿಸಿದ್ದಾರೆ.
![](https://kannadabeatz.com/wp-content/uploads/2024/01/img-20240124-wa01075007479283177716670-760x1024.webp)
![](https://kannadabeatz.com/wp-content/uploads/2024/01/Picsart_24-01-24_22-22-37-896-jpg.webp)