Kannada Beatz
News

ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

‘ಕವಚ’ ಸಿನಿಮಾ ಖ್ಯಾತಿಯ ನಟಿ ಹಾಗೂ ನಿರ್ಮಾಪಕಿ ಇತಿ ಆಚಾರ್ಯ ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಕಂಪೋಸ್ ಮಾಡಿರುವ ಆಲ್ಬಂ ಸಾಂಗ್ ನಲ್ಲಿ ಕನ್ನಡತಿ ಇತಿ ಆಚಾರ್ಯ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮೆರ್ಲಿನ್ ಬಾಬಾಜಿ ಅಮೇರಿಕದಲ್ಲಿ ಖ್ಯಾತಿ ಗಳಿಸಿರುವ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ. ಕಳೆದ ವರ್ಷ ಇವರ ‘ವೈಬ್ಸ್’ ಸಾಂಗ್ ಬಿಡುಗಡೆಯಾಗಿ ಪ್ರಪಂಚದಾದ್ಯಂತ ಜನಪ್ರಿಯ ಗೊಂಡಿತ್ತು. ಸೋಶಿಯಲ್ ಮೀಡಿಯಾ ಸೆನ್ಸೇಶನ್ ಆಗಿದ್ದ ‘ವೈಬ್ಸ್’ ಸಾಂಗ್ ಹತ್ತು ಮಿಲಿಯನ್ ವೀವ್ಸ್ ಪಡೆದುಕೊಂಡಿತ್ತು. ಇದೀಗ ಮತ್ತೊಂದು ವೀಡಿಯೋ ಸಾಂಗ್ ಮೂಲಕ ಮೆರ್ಲಿನ್ ಸೆನ್ಸೇಶನ್ ಕ್ರಿಯೇಟ್ ಮಾಡಲು ಸಜ್ಜಾಗಿದ್ದಾರೆ. ತಮ್ಮ ಹೊಸ ವೀಡಿಯೋ ಹಾಡಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿರುವ ನಟಿ ಹಾಗೂ ಮಾಡೆಲ್ ಇತಿ ಆಚಾರ್ಯ ಅವರ ಜೊತೆ ಕೈ ಜೋಡಿಸಿರೋದು ವಿಶೇಷ.

ಮೆರ್ಲಿನ್ ಬಾಬಾಜಿ ಕಳೆದ ಒಂದು ವರ್ಷದಿಂದ ನನಗೆ ಪರಿಚಿತರು. ಅವರ ಸಂಗೀತದ ದೊಡ್ಡ ಅಭಿಮಾನಿ ನಾನು. ‘ಲವ್ ಹರ್ ಟೂ ಮಚ್’ ಸಾಂಗ್ ಕೇಳಿದ ಮೇಲೆ ತುಂಬಾ ಇಷ್ಟವಾಯ್ತು. ನಾನು ಈ ಹಾಡಿನಲ್ಲಿ ನಟಿಸುವೆ ಎಂದು ಹೇಳಿದೆ ಎಂದು ಇತಿ ಆಚಾರ್ಯ ಸಂತಸ ಹಂಚಿಕೊಂಡಿದ್ದಾರೆ.

ಇತಿ ಆಚಾರ್ಯ ಸಹೋದರ ಅಭಿ ಆಚಾರ್ಯ ಕೂಡ ಅಮೇರಿಕಾದಲ್ಲಿ ಸಂಗೀತ ಕಲಾವಿದರಾಗಿದ್ದು, 2023ರ ಗ್ರ್ಯಾಮ್ಮಿ ಅವಾರ್ಡ್ ನಲ್ಲಿ ಇವರ ಹೆಸರು ನಾಮ ನಿರ್ದೇಶನವಾಗಿತ್ತು. ಅಮೇರಿಕಾದಲ್ಲಿ ನನ್ನ ಸಹೋದರ ನೆಲೆಸಿರೋದು ಅಲ್ಲಿನ ಜನರೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗಿದೆ ಎನ್ನುತ್ತಾರೆ ಇತಿ ಆಚಾರ್ಯ.

ನಟಿ ಹಾಗೂ ಮಾಡೆಲ್ ಆಗಿರುವ ಇತಿ ಆಚಾರ್ಯ 2016ರ ಮಿಸ್ ಸೌತ್ ಇಂಡಿಯಾ ವಿನ್ನರ್. ಆರ್ ವಿ ಎಸ್ ಪಿ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಒಳಗೊಂಡಂತೆ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಹಿರಿಮೆ ಇವರದ್ದು, 2022ರ ಕ್ಯಾನಿಸ್ ಫಿಲ್ಮಂ ಫೆಸ್ಟ್ ರೆಡ್ ಕಾರ್ಪೆಟ್ ನಲ್ಲೂ ಇತಿ ಹೆಜ್ಜೆ ಹಾಕಿದ್ದಾರೆ. ಇದೀಗ ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದ್ದಾರೆ.

Related posts

“ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಮೊದಲ ಹಾಡು ಬಿಡುಗಡೆ.

Kannada Beatz

ಮೇ 18 ರಂದು ಅದ್ದೂರಿಯಾಗಿ ನಡೆಯಲಿದೆ “ಚಿತ್ರಸಂತೆ” ಪ್ರಶಸ್ತಿ ಪ್ರದಾನ ಸಮಾರಂಭ .

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

Leave a Comment

Share via
Copy link
Powered by Social Snap