Kannada Beatz
News

ಸ್ಟಾರ್ ಸುವರ್ಣದಲ್ಲಿ ಇದೇ ಶನಿವಾರದಿಂದ ಆರಂಭವಾಗಲಿದೆ “ಇಸ್ಮಾರ್ಟ್ ಜೋಡಿ”.

ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ.

ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ.
ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ “ಇಸ್ಮಾರ್ಟ್ ಜೋಡಿ”‌ ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ ಶನಿವಾರದಿಂದ ಆರಂಭವಾಗಲಿದೆ. ಹತ್ತು ಸೆಲೆಬ್ರಿಟಿ ಜೋಡಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದ ಬಗ್ಗೆ ಗೋಲ್ಡನ್ ಸ್ಟಾರ್ ಗಣೇಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇದುವರೆಗೂ ಮನರಂಜನೆಯ ಮತ್ತು ಸ್ನೇಹದ ಕುರಿತಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದೇನೆ. ಈಗ ಮೊದಲ ಬಾರಿಗೆ ಸೆಲೆಬ್ರಿಟಿ ಜೋಡಿಗಳ ಕುರಿತಾಗಿ ಒಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದೇನೆ. ಎರಡು ವರ್ಷ ಗ್ಯಾಪ್ ಆಗಿತ್ತು. ಬೇರೇನೋ ಹೊಸದು ಮಾಡಬೇಕು, ಫ್ಯಾಮಿಲಿ ಆಡಿಯನ್ಸ್ ತಲುಪಬೇಕು ಎಂದು ಯೋಚಿಸುತ್ತಿದ್ದಾಗ ಸ್ಟಾರ್ ಸುವರ್ಣದವರು ಈ ಕಾರ್ಯಕ್ರಮದ ಕುರಿತು ಹೇಳಿದರು. ಇದೊಂದು ಸೆಲೆಬ್ರಿಟಿ ಜೋಡಿಯ ಕುರಿತಾದ ಕಾರ್ಯಕ್ರಮ. ಇಲ್ಲಿ ಹೊಸದಾಗಿ ಮದುವೆಯಾದವರಿಂದ 40 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರವರೆಗೂ ಇದ್ದಾರೆ. ಇವತ್ತಿನ ದಿನಗಳಲ್ಲಿ ದಂಪತಿಗಳು ಸಣ್ಣಸಣ್ಣ ವಿಷಯಕ್ಕೂ ಬಹಳ ಬೇಗ ದೂರ ಆಗುತ್ತಿದ್ದಾರೆ. ಜೀವನ ಎಂದರೆ ಅದಲ್ಲ, ಇಲ್ಲಿ ಏಳುಬೀಳು, ಸುಖ-ಸಂತೋಷ ಎಲ್ಲವೂ ಇರುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಇದು. ಈ ಕಾರ್ಯಕ್ರಮವು ನಾಲ್ಕು ಜನರಿಗೆ ಮಾದರಿ ಆಗಬೇಕು, ನೀವೇ ಇದನ್ನು ನಡೆಸಿಕೊಡಬೇಕು ಎಂದರು. ಒಳ್ಳೆಯ ಕಾನ್ಸೆಪ್ಟ್ ಆದ್ದರಿಂದ ಒಪ್ಪಿಕೊಂಡೆ. ಒಟ್ಟು 26 ಕಂತುಗಳು. ಪ್ರತಿ ಶನಿವಾರ ಮತ್ತು ಭಾನುವಾರ ರಾತಿ 9ಕ್ಕೆ ಪ್ರಸಾರವಾಗಲಿದೆ. ಈಗಾಗಲೇ ಆರಂಭಿಕ ಎರಡು ಕಂತುಗಳ ಚಿತ್ರೀಕರಣ ನಡೆದಿದೆ. ಈಗ ಇನ್ನೆರೆಡು ಕಂತುಗಳ ಚಿತ್ರೀಕರಣ ಆಗುತ್ತಿದೆ. ಇಲ್ಲಿ ಒಬ್ಬೊಬ್ಬರ ಜರ್ನಿ ಒಂದೊಂದು ರೀತಿ. ಹಿರಿಯರ ಜೊತೆಗೆ ಮಾತನಾಡುವಾಗ ಅವರ ಜೀವನದ ಬಗ್ಗೆ ಕೇಳಿ ಬಹಳ ಖುಷಿಯಾಯಿತು. ನಾನು ಸಹ ಒಬ್ಬ ಪ್ರೇಕ್ಷಕನಾಗಿ ಬಹಳ ಕುತೂಹಲ ಎಂದನಿಸಿತು. ಒಟ್ಟಿನಲ್ಲಿ ಎಲ್ಲರೂ ಪ್ರೀತಿಯಿಂದ ಬದುಕಿ ಅಂತ ಸಂದೇಶ ಸಾರುವಂತಹ ಕಾರ್ಯಕ್ರಮ ಇದು. ಇಲ್ಲಿ ತೀರ್ಪುಗಾರರಿರುವುದಿಲ್ಲ. ನಾನು ನಿರೂಪಕನಾಗಿರುತ್ತೇನೆ. ಸ್ಪರ್ಧಿಗಳಿಗೆ ಹಲವು ಟಾಸ್ಕ್ಗಳನ್ನು ನೀಡಲಾಗುತ್ತದೆ. ಗೆದ್ದವರಿಗೆ ಅಂಕಗಳನ್ನು ನೀಡಲಾಗುತ್ತದೆ. ಮೊದಲ ಐದು ಕಂತುಗಳಲ್ಲಿ ಯಾವುದೇ ಎಲಿಮಿನೇಷನ್ ಇರುವುದಿಲ್ಲ. ಗೆದ್ದವರಿಗೆ 10 ಲಕ್ಷ ಬಹುಮಾನ ನೀಡಲಾಗುತ್ತದೆ. ಇಲ್ಲಿ ಚಿತ್ರರಂಗ, ಕಿರುತೆರೆ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯವಾಗಿರುವ ಜೋಡಿಗಳು ಭಾಗವಹಿಸುತ್ತಿವೆ. ಜತೆಗೆ ಸಿನಿಮಾ ಪ್ರಮೋಷನ್ಗಳು ಸಹ ಇರುತ್ತವೆ. ಸೆಲೆಬ್ರಿಟಿಗಳು ಆಗಾಗ ಅತಿಥಿಯಾಗಿ ಬರುತ್ತಿರುತ್ತಾರೆ ಎಂದರು ಗಣೇಶ್.

ನಿರ್ದೇಶಕ ಪ್ರಶಾಂತ್​, ವರ್ಷ, ಉಷಾ ಗೌಡ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ರಾಕ್​ಲೈನ್​ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅದ್ಭುತ ಸೆಟ್​ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಶೀರ್ಷಿಕೆ ಹಾಡಿಗೆ ALL OK ಸಂಗೀತ ಸಂಯೋಜನೆ ಮಾಡಿ ಅವರೆ ಹಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೊದಲ್ಲಿ ಈ ಹಾಡು ಜನರ ಮನ ಗೆದ್ದಿದೆ.

“ಇಸ್ಮಾರ್ಟ್ ಜೋಡಿ” ಯಲ್ಲಿ ಭಾಗವಹಿಸುತ್ತಿರುವ ಸೆಲೆಬ್ರಿಟಿ ಜೋಡಿಗಳು

ವಿನಯ್​ ಗೌಡ ಮತ್ತು ಅಕ್ಷತಾ ಗೌಡ,
ಸುಮನ್​ ನಗರ್​ಕರ್​ ಮತ್ತು ಗುರುದೇವ್​ ನಾಗರಾಜ,
ದಿಶಾ ಮದನ್​ ಮತ್ತು ಶಶಾಂಕ್​ ವಾಸುಕಿ ಗೋಪಾಲ್​,
ಪ್ರತಿಕ್​ ಪ್ರೊ ಮತ್ತು ಮೌಲ್ಯಶ್ರೀ ಎಂ,
ಶ್ರೀರಾಮ ಸುಳ್ಯ ಮತ್ತು ಪುನೀತ ಆಚಾರ್ಯ,
ರಘು ವೈನ್​ ಸ್ಟೋರ್​ ಮತ್ತು ವಿದ್ಯಾಶ್ರೀ,
ಇಂಪನಾ ಜಯರಾಜ್​ ಮತ್ತು ಅಜಿತ್​ ಜಯರಾಜ್​,
ಸಪ್ನ ದೀಕ್ಷಿತ್​ ಮತ್ತು ಅಶ್ವಿನ್​ ದೀಕ್ಷಿತ್​,ಜೈಜಗದೀಶ್​ ಮತ್ತು ವಿಜಯಲಕ್ಷ್ಮಿ ಸಿಂಗ್​, ರಿಚರ್ಡ್​ ಲೂಯಿಸ್​ ಮತ್ತು ಹ್ಯಾರಿಯೆಟ್​ ಲೂಯಿಸ್​ .

Related posts

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

ಸದ್ಯದಲ್ಲೇ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಾಂಡ” ಚಿತ್ರ ಬಿಡುಗಡೆ

Kannada Beatz

ಅನಿಲ್ ಸಿದ್ದು (AnilSiddhu)🚩
ನಟನೆಯ “ಕನವರಸಿದೆ” ಒಂದೊಳ್ಳೆ ಹಾರ್ಟ್ ಟಚಿಂಗ್ & ಫೀಲಿಂಗ್ ಎಮೋಷನಲ್ ಸಾಂಗ್ ನಿಮ್ಮ ಮುಂದೆ🎥

Kannada Beatz

Leave a Comment

Share via
Copy link
Powered by Social Snap