Kannada Beatz
News

ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ಸಿಕ್ಕಳು ನಾಯಕಿ..ದಿಗಂತ್ ಗೆ ಜೋಡಿಯಾದ ಯುವ ನಟಿ ಧನು ಹರ್ಷ..ವಿಶೇಷ ದಿನದಂದೇ ನಾಯಕಿ ಪರಿಚಯಿಸಿದ ಚಿತ್ರತಂಡ

ದೂದ್ ಪೇಡ ದಿಗಂತ ನಟಿಸುತ್ತಿರುವ ಹೊಸ ಸಿನಿಮಾ ಎಡಗೈಯೇ ಅಪಘಾತಕ್ಕೆ ಕಾರಣ. ಇವತ್ತು ವಿಶ್ವ ಎಡಚರ ದಿನದ ಅಂಗವಾಗಿ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ. ಧನು ಹರ್ಷ ಎಂಬ ಯುವ ಪ್ರತಿಭೆ ಈ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ವಿಶ್ವ ಎಡಚರ ದಿನದ ಅಂಗವಾಗಿ ನಾಯಕಿಯ ಇಂಟ್ರೂಡಕ್ಷನ್ ಟೀಸರ್ ನ್ನು ಚಿತ್ರತಂಡ ರಿಲೀಸ್ ಮಾಡಿದೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ಧನು ದಿಗಂತ್ ಗೆ ಜೋಡಿಯಾಗಿ ನಟಿಸುತ್ತಿದ್ದು, ರಾಧಿಕಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ‘ಎಡಗೈ’ ಆಧಾರಿತ ಪರಿಕಲ್ಪನೆ ಸಿನಿಮಾವಾಗಿರೋದ್ರಿಂದ ಈ ಪಾತ್ರ ತಮಗೆ ವಿಶೇಷವಾಗಿದ್ದು,
ಡಿಫರೆಂಟ್ ಶೇಡ್ ನಲ್ಲಿ ಕಾಣಿಸಿಕೊಳ್ಳುವುದಾಗಿ ಧನು ಹರ್ಷ ಹೇಳಿದ್ದಾರೆ.

ಸಮರ್ಥ್ ಬಿ ಕಡ್ಕೋಲ್ ನಿರ್ದೇಶನದಲ್ಲಿ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಮೂಡಿಬರ್ತಿದ್ದು, ಆಗಸ್ಟ್ ತಿಂಗಳಾಂತ್ಯಕ್ಕೆ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಗುರುದತ್ತ ಗಾಣಿಗ ಮತ್ತು ಸಮರ್ಥ ಕಡ್ಕೋಳ್ ಜಂಟಿಯಾಗಿ ನಿರ್ಮಿಸಿರುವ ಚಿತ್ರಕ್ಕೆ ಅಭಿಮನ್ಯು ಸದಾನಂದ್ ಛಾಯಾಗ್ರಹಣವಿದೆ. ಈ ಹಿಂದೆ ದಿಗಂತ್ ಫಸ್ಟ್ ಲುಕ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ನಾಯಕಿ ಇಂಟ್ರೂಡಕ್ಷನ್ ಟೀಸರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

Related posts

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

Kannada Beatz

“ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೆ ಪಾದಾರ್ಪಣೆ ಮಾಡಿದ ನವರಸನ್

Kannada Beatz

ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್.

Kannada Beatz

Leave a Comment

Share via
Copy link
Powered by Social Snap