Kannada Beatz
News

*ವಿನೂತನವಾಗಿ ಬಿಡುಗಡೆಯಾಯಿತು ಮಡೆನೂರ್ ಮನು ಅಭಿನಯದ “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಮೊದಲ ಹಾಡು

“ನಮ್ ಪೈಕಿ ಒಬ್ಬ ಹೋಗ್ಬುಟ” ಅಂತ ಹಾಡು ಬರೆದ‌ ಯೋಗರಾಜ್ ಭಟ್.”

ಈಗಿನ ಜನತೆಗೆ ಬೇಕಾದಂತಹ ಹಾಡುಗಳನ್ನು ಬರೆಯುವ ಗೀತರಚನೆಕಾರರಲ್ಲಿ ಯೋಗರಾಜ್ ಭಟ್ ಮೊದಲಿಗರು ಎನ್ನಬಹುದು. ದಿನ ನಾವು ಆಡುವ ಮಾತುಗಳನ್ನೆ ಯೋಗರಾಜ್ ಭಟ್ ಅವರು ಹಾಡುಗಳ ರೂಪಕ್ಕೆ ತಂದು ಎಲ್ಲರೂ ಗುನುಗುವ ಹಾಗೆ ಮಾಡುತ್ತಾರೆ. ಪ್ರಸ್ತುತ ಯೋಗರಾಜ್ ಭಟ್ ಅವರು “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೊ” ಚಿತ್ರಕ್ಕೆ “ನಮ್ ಪೈಕಿ ಒಬ್ಬ ಹೋಗ್ಬುಟ” ಎಂಬ ಹಾಡನ್ನು ಬರೆದಿದ್ದಾರೆ. ಮನೋಮೂರ್ತಿ ಅವರು ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ಆಂಥೋನಿ ದಾಸ್ ಅವರ ಕಂಠಸಿರಿಯಲ್ಲಿ‌ ಈ ಹಾಡು ಮೂಡಿಬಂದಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ನಡೆಯಿತು. ನಾಯಕ ನಟ ಮನು ಬ್ಯಾಂಡ್ ಬಾರಿಸಿಕೊಂಡು ಬ್ಯಾಂಡ್ ಸೆಟ್ ಅವರ ಹಾಗೂ ಅರ್ಕೆಸ್ಟ್ರಾ ಕಲಾವಿದರ ಜೊತೆಗೆ ವೇದಿಕೆಗೆ ಬಂದು ಈ‌ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನನಗೆ “ಕಾಮಿಡಿ ಕಿಲಾಡಿಗಳು” ಸಮಯದಲ್ಲಿ ಮನು ನಟನೆ ನೋಡಿ ನೀನು ಇಲ್ಲಿ ಮಾತ್ರ ಅಲ್ಲ. ಸಿನಿಮಾಗೂ ಸಲ್ಲುವವನು ಅಂತ ಹೇಳಿದ್ದೆ. ಈ ಚಿತ್ರದ ಕಥೆ ನಾನು ಹಾಗೂ ಇಸ್ಲಾಮುದ್ದೀನ್ ಸೇರಿ ಬರೆದಿದ್ದೇವೆ‌. ಈ ಕಥೆಗೆ ಮನು ಸೂಕ್ತ ನಾಯಕ. ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ರಾಮ್ ನಾರಾಯಣ್ ನಿರ್ದೇಶಿಸುತ್ತಿದ್ದಾರೆ. ಮನೋಮೂರ್ತಿ ಸಂಗೀತ ನೀಡಿದ್ದಾರೆ. ಇನ್ನು ಇಂದು ಬಿಡುಗಡೆಯಾಗಿರುವ ಈ ಹಾಡನ್ನು ನಾನು ಬರೆಯಲು ಮನೋಮೂರ್ತಿ ಅವರ ಕಾರು ಚಾಲಕ ಸ್ಪೂರ್ತಿ‌. ಆತ ಇಂದು ನಮ್ಮೊಂದಿಗಿಲ್ಲ. ಆತನ ಸಾವು ಹಾಗೂ ಆನಂತರ ನಡೆದ ಸನ್ನಿವೇಶಗಳೆ ನಾನು ಹಾಡು ಬರೆಯಲು ಕಾರಣ ಎಂದರು ಯೋಗರಾಜ್ ಭಟ್.

ನಾನು ನನ್ನ ಜಾನಾರ್ ಹೊರತು ಪಡಿಸಿ ಸಂಗೀತ ನೀಡಿರುವ ಎರಡನೇ ಚಿತ್ರ ಇದು. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಯೋಗರಾಜ್ ಭಟ್ ಮನಮುಟ್ಟುವ ಹಾಗೆ ಬರೆದಿದ್ದಾರೆ ಎಂದು ಸಂಗೀತ ನಿರ್ದೇಶಕ ಮನೋಮೂರ್ತಿ ಹೇಳಿದರು.

ಬಾಬು ಎಂಬ ನನ್ನ ಸ್ನೇಹಿತನಿಂದ ನನಗೆ ಈ ಚಿತ್ರತಂಡದ ಪರಿಚಯವಾಯಿತು ಎಂದು ಮಾತನಾಡಿದ ನಿರ್ದೇಶಕ ರಾಮ್ ನಾರಾಯಣ್, ತಾವೇ ಒಬ್ಬ‌ ನಿರ್ದೇಶಕನಾಗಿದರೂ ನನಗೆ ಸಿನಿಮಾ ನಿರ್ದೇಶನಕ್ಕೆ ಅವಕಾಶ ಕೊಟ್ಟಿದ್ದು ಅವರ ದೊಡ್ಡ ಗುಣ. ಇನ್ನೂ ಮನೋಮೂರ್ತಿ ಅವರ ಸಂಗೀತ ನಿರ್ದೇಶನದಲ್ಲಿ ಈ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿ ಬಂದಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ ಎಂದರು.

ನಾನು ಈ ಸಿನಿಮಾ ಆರಂಭಿಸಿದ್ದು ಮನುಗೋಸ್ಕರ. ಆದರೆ, ಟೇಕ್ ಆಫ್ ಆಗಿದ್ದು ಯೋಗರಾಜ್ ಭಟ್ ಅವರಿಂದ ಇಡೀ ತಂಡದ ಶ್ರಮದಿಂದ ಒಂದೊಳ್ಳೆ ಸಿನಿಮಾ ನಿರ್ಮಾಣವಾಗುತ್ತಿದೆ ಎಂದು ನಿರ್ಮಾಪಕ ಸಂತೋಷ್ ತಿಳಿಸಿದರು.

ನನಗೆ ಒಂದು ದೊಡ್ದ ಬ್ಯಾನರ್ ನಲ್ಲಿ ನಟಿಸುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ ಎಂದು ಮಾತು ಆರಂಭಿಸಿದ ನಾಯಕ ಮಡೆನೂರ್ ಮನು, ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಯೋಗರಾಜ್ ಭಟ್ ಅವರಿಗೆ ಧನ್ಯವಾದ. ನಾನು ಮೂಲತಃ ಆರ್ಕೇಸ್ಟ್ರಾ ಕಲಾವಿದ. ಈ ಚಿತ್ರದಲ್ಲೂ ನನ್ನದು ಅದೇ ಪಾತ್ರ. ಸಾವಿನ ಬಗ್ಗೆ ಎಲ್ಲರಿಗೂ ಅರ್ಥವಾಗುವ ಹಾಗೆ ಅರ್ಥಗರ್ಭಿತ ಹಾಡೊಂದನ್ನು ಯೋಗರಾಜ್ ಭಟ್ ಅವರು ಬರೆದಿದ್ದಾರೆ. ಮನೋಮೂರ್ತಿ ಸಂಗೀತ ನೀಡಿದ್ದಾರೆ ಹಾಗೂ ಅವರದೆ ಆಡಿಯೋ ಕಂಪನಿ ಮೂಲಕ ಬಿಡುಗಡೆ ಮಾಡಿದ್ದಾರೆ ಎಂದರು.

ನಾನು ಕೂಡ ಆರ್ಕೆಸ್ಟ್ರಾ ಕಲಾವಿದ. ಇಂದು ಬಿಡುಗಡೆಯಾಗಿರುವ ಈ ಹಾಡು ಈ ಬಾರಿಯ ರಾಜ್ಯೋತ್ಸವಕ್ಕೆ ಎಲ್ಲಾ ಕಡೆ ರಾರಾಜಿಸಲಿದೆ. ಈ ಚಿತ್ರದಲ್ಲಿ ನನ್ನ ಪಾತ್ರದ ‌ಹೆಸರು ತಮಟೆ. ಸದಾ ನಾಯಕನ ಜೊತೆಗಿರುತ್ತೇನೆ‌ ಎಂದು ತಬಲ ನಾಣಿ ತಿಳಿಸಿದರು.

ಮಡೆನೂರ್ ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

ಜೂನ್ 7 ರಂದು ಬಿಡುಗಡೆಯಾಗಲಿದೆ ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣವಾಗಿರುವ “ಯಂಗ್ ಮ್ಯಾನ್” ಚಿತ್ರ

Kannada Beatz

ಸ್ನೇಹಿತರ ಗ್ಯಾಂಗ್ ಸೇರಿ ನಿರ್ಮಿಸಿರುವ “ಯೆಲ್ಲೋ ಗ್ಯಾಂಗ್ಸ್” ಟ್ರೇಲರ್ ಬಿಡುಗಡೆ.

Kannada Beatz

Leave a Comment

Share via
Copy link
Powered by Social Snap