Kannada Beatz
News

ಡಾಲಿಯ 25ನೇ ಸಿನೆಮಾ “ಗುರುದೇವ್ ಹೊಯ್ಸಳ” ಟ್ರೈಲರ್ ಬಿಡುಗಡೆಗೆ ಡೇಟ್ ಫಿಕ್ಸ್

ಡಾಲಿ ಧನಂಜಯ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ನಟ ಎಂದರೆ ತಪ್ಪಾಗಲ್ಲ. ಈಗಾಗಲೇ ತಮ್ಮ ವಿಭಿನ್ನ ಪಾತ್ರಗಳಿಂದ ಮನೆ ಮಾತಾಗಿರುವ ಧನಂಜಯರವರ ಸಿನಿ ಜರ್ನಿಯ ಸಿಲ್ವರ್ ಜೂಬ್ಲೀ ಸಂಭ್ರಮ ಬಹಳ ಜೋರಾಗಿದೆ.
ಧನಂಜಯ ಅಭಿನಯದ 25ನೇ ಸಿನೆಮಾ ಗುರುದೇವ್ ಹೊಯ್ಸಳ ಭರವಸೆ ಹೆಚ್ಚಿಸಿದ್ದು, ಈ ಚಿತ್ರದಲ್ಲಿ ಡಾಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೂ ಮಾಡಿರದ ರೀತಿಯ ಪಾತ್ರ ಧರಿಸಿ, ಗುರುದೇವ್ ಹೊಯ್ಸಳ ಆಗಿ ಡಾಲಿ ಧನಂಜಯ್ ತೆರೆ ಮೇಲೆ ಅಬ್ಬರಿಸಲಿದ್ದಾರೆ.

ಈಗಾಗಲೇ ಸಿನೆಮಾದ ಹಾಡುಗಳು, ಟೀಸರ್ ಬಿಡುಗಡೆಯಾಗಿದ್ದು, ಭಾರಿ ಸದ್ದು ಮಾಡುತ್ತಿವೆ. ನಿರೀಕ್ಷೆ ಹೆಚ್ಚಿಸುತ್ತಲೇ ಇರುವ ಗುರುದೇವ್ ಹೊಯ್ಸಳ ಸಿನೆಮಾ ರಿಲೀಸ್ ಗೆ ಇನ್ನೇನು ಕೆಲವೇ ಕೆಲವು ದಿನ ಬಾಕಿ ಇದ್ದು, ಅಭಿಮಾನಿಗಳು ಕಾತುರರಾಗಿ ಕಾಯುತ್ತಿದ್ದಾರೆ. ಹೀಗಿರುವಾಗಲೇ ಚಿತ್ರತಂಡ ಟ್ರೈಲರ್ ಯಾವಾಗ ಬಿಡುಗಡೆ ಮಾಡುತ್ತಾರೆ ಎನ್ನುವ ಪ್ರಶ್ನೆಗೆ ಬ್ರೇಕ್ ಬಿದ್ದಿದೆ.
ಮಾರ್ಚ್ 20, ಸಂಜೆ 7.29 ನಿಮಿಷಕ್ಕೆ “ಗುರುದೇವ್ ಹೊಯ್ಸಳ” ಚಿತ್ರದ ಟ್ರೈಲರ್ ಅನ್ನು ಆನಂದ್ ಆಡಿಯೋ ಚಾನಲ್ ನಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. “ಗುರುದೇವ್ ಹೊಯ್ಸಳ” ಚಿತ್ರದ ನಾಯಕ ನಟ ಪ್ರಾಮಾಣಿಕ ಅಧಿಕಾರಿನಾ? ನಟರಾಕ್ಷಸನ ರೀತಿ ಭಯಂಕರ ಖಡಕ್ ಅಧಿಕಾರಿನಾ? ಇಲ್ಲಾ ಎನ್​ಕೌಂಟರ್ ಸ್ಪೆಷಲಿಸ್ಟಾ? ಈ ಎಲ್ಲ ಪ್ರಶ್ನೆಗಳು ಸಿನಿ ಪ್ರೇಕ್ಷಕರನ್ನು ಕಾಡುತ್ತಿದ್ದು, ಟ್ರೈಲರ್ ನಲ್ಲಿ ಈ ಎಲ್ಲಾ ಪ್ರಶ್ನೆಗೆ ಉತ್ತರ ಸಿಗುತ್ತಾ ಎಂದು ಕಾಯಬೇಕಿದೆ.

ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಸಿನಿಮಾ ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ.

ಒಂದು ಸೋಷಿಯಲ್ ಮೆಸೇಜ್ ಹೊತ್ತಿರುವ ಪಕ್ಕಾ ಕಮರ್ಷಿಯಲ್ ಸಿನೆಮಾ ಇದಾಗಿದ್ದು ನಿರ್ದೇಶಕ ವಿಜಯ್. ಎನ್ ರವರು ಆಕ್ಷನ್ ಕಟ್ ಹೇಳಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಗುರುದೇವ್ ಹೊಯ್ಸಳನಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಕಾಣಿಸಿಕೊಂಡಿದ್ದು, ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

Related posts

ಪ್ರೇಮವನ್ನು, ಸ್ನೇಹವನ್ನು ಆರಾಧಿಸುವವರ ಪಾಲಿಗೆ
ಕಂಬನಿ ಹರಿಸುವ , ಮನಸ್ಸಿಗೆ ಮುದ ನೀಡುವ ,
ಕನ್ನಡ ಚಿತ್ರರಂಗದ ಮಾಸ್ಟರ್ ಕ್ಲಾಸ್, #ಪ್ರೇಮಂ_ಪೂಜ್ಯಂ

administrator

ಬಿಂದ್ಯಾ ಮೂವೀಸ್ ಮೂಲಕ ಹೊಸವರ್ಷಕ್ಕೆ ಬಂತು “ಲಕಲಕ ಲ್ಯಾಂಬರ್ಗಿನಿ”

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

Leave a Comment

Share via
Copy link
Powered by Social Snap