Kannada Beatz
News

“ಅಮೄತ ಅಪಾರ್ಟ್ಮಮೆಂಟ್ಸ್” ತಂಡದಿಂದ, “ಶುರುವಾಗಬೇಕು ಮತ್ತೊಮ್ಮೆ ನಮ್ಮ ಒಲವು” ಎಂಬ ಪ್ರೇಮಗೀತೆಯನ್ನು ಯುಟ್ಯೂಬ್ ಛಾನಲ್ ಮುಖಾಂತರ ಬಿಡುಗಡೆ ಮಾಡಿದೆ.


ಗಂಡ-ಹೆಂಡತಿಯ ಮಧ್ಯದ ಮುನಿಸು ಕರಗುವ ಸನ್ನಿವೇಶಕ್ಕೆ ತಕ್ಕಂತೆ, ಇಡೀ ಸಿನೆಮಾದ ಕಥೆಯ ಸಾರಾಂಶವನ್ನು ಹೇಳುವಂತಹ, ಪ್ರೇಕ್ಷನ ಮನ ತಟ್ಟುವಂತಹ ಒಂದು ವಿಶೇಷ ಹಾಡಿನ ಅವಶ್ಯಕತೆ ಇತ್ತು. ಈ ಥರದ ಒಂದು ವಿನೂತನ ಪ್ರೇಮಗೀತೆಗೆ, ಹೂ-ಹೃದಯದ ಪ್ರೇಮಕವಿ ಕೆ.ಕಲ್ಯಾಣರವರೇ ಸೂಕ್ತ ಎಂದು ನಾನು ಅವರ ಬಳಿ ಹೋದೆ ಎಂದು ಚಿತ್ರದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ) ಚಿತ್ರಗೀತೆಯ ಹಿಂದಿನ ಕಥೆಯನ್ನು ಬಿಚ್ಚಿಟ್ಟರು.


ಯುವಪ್ರೇಮಿಗಳ ಪ್ರೀತಿ-ಪ್ರೇಮ-ಮುನಿಸು-ತಲ್ಲಣಗಳ ಭಾವಕ್ಕೆ ತಕ್ಕಂತೆ ಗೀತೆಯ ಸಾಲುಗಳನ್ನು ಕೆ.ಕಲ್ಯಾಣ ಬರೆದಿದ್ದಾರೆ. ಅದಕ್ಕೆ ಪೂರಕವಾಗಿ ಸಂಗೀತ ನಿರ್ದೇಶಕ ಎಸ್.ಡಿ.ಅರವಿಂದ ಕೇಳುಗರನ್ನು ಮೋಡಿ ಮಾಡುವಂತಹ ಸಂಗೀತ ನೀಡಿದ್ದಾರೆ.
ಈ ಯುಗಳ ಹಾಡಿಗೆ ವಾಣಿ ಹರಿಕೃಷ್ಣ ಮತ್ತು ಅಜಯ ವಾರಿಯರ್ ಧ್ವನಿ ನೀಡಿದ್ದಾರೆ. ಬಹಳ ದಿನಗಳ ನಂತರ ಈ ಥರದ ಶುಧ್ಧ ಸಾಹಿತ್ಯಕ್ಕೆ ಧ್ವನಿಯಾಗಿರುವದಕ್ಕೆ ಇಬ್ಬರೂ ಸಂತೋಷ ವ್ಯಕ್ತಪಡಿಸಿದ್ದಾರೆ.
ನವೆಂಬರ ತಿಂಗಳ ಕೊನೆಯ ವಾರದಲ್ಲಿ “ಆಮೃತ ಅಪಾರ್ಟಮೇಂಟ್ಸ” ಸಿನೆಮಾ ಬಿಡುಗಡೆಯಾಗಲಿದ್ದು, ಚಿತ್ರ ತಂಡ ಪ್ರೇಕ್ಷಕರ ಮನಸ್ಸು ಗೆಲ್ಲುವ ಉತ್ಸಾಹದಲಿದ್ದಾರೆ.
ಧನ್ಯವಾದಗಳು
-ಗುರುರಾಜ ಕುಲಕರ್ಣಿ (ನಾಡಗೌಡ)
ನಿರ್ಮಾಪಕ-ನಿರ್ದೇಶಕ

Related posts

ಕೊನೆಯ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿರುವ ಆಪರೇಷನ್ ಲಂಡನ್ ಕೆಫೆ!
——————–

Kannada Beatz

ಪ್ರಮೋದ್ ಈಗ ‘ಬಾಂಡ್ ರವಿ’….ಯುಗಾದಿ ಹಬ್ಬಕ್ಕೆ ‘ಬಾಂಡ್ ರವಿ’ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್

Kannada Beatz

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ ವಾಸುಕಿ ವೈಭವ್ ಹಾಡಿರುವ ಈ ಆಲ್ಬಂ ಸಾಂಗ್.

administrator

Leave a Comment

Share via
Copy link
Powered by Social Snap