Kannada Beatz
News

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Related posts

ಅಣ್ಣ-ತಂಗಿಯರ ಬಾಂಧವ್ಯದ ಹಾಡು ಸೋಲ್ ಆಫ್ ಬೆಂಕಿ…ಚೈತ್ರಾ ಆಚಾರ್ ಕಂಠದಲ್ಲಿ ಕೇಳಿ ಮನಮುಟ್ಟುವ ಗೀತೆ

Kannada Beatz

*ಮಕರ ಸಂಕ್ರಾಂತಿ ಸಂದರ್ಭದಲ್ಲಿ *”ಬನಾರಸ್”* ಚಿತ್ರದ ನೂತನ ಪೋಸ್ಟರ್‌ ಅನಾವರಣ.*

Kannada Beatz

ಚಮಕ್ ಜೋಡಿ ‘ಸಖತ್’ ಟೀಸರ್ ರಿಲೀಸ್…ಇದು ಸಿಂಪಲ್ ಸುನಿ ಡೈಲಾಗ್ ಸ್ಪೆಷಲ್!
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಮೋಸ್ಟ್ ಅವೇಟೇಡ್ ಸಿನಿಮಾ ಸಖತ್. ಪೋಸ್ಟರ್ ಹಾಗೂ ಸಾಂಗ್ ಮೂಲಕವೇ ಹೊಸತನ ತೆರೆದಿಟ್ಟಿರೋ ಸಖತ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಗಣೇಶ್ ಸ್ಟೈಲೀಶ್ ಲುಕ್.. ಸುನಿ ಡೈಲಾಗ್ ಕಿಕ್.. ಜೂಡಾ ಸ್ಯಾಂಡಿ ಮ್ಯೂಸಿಕ್.. ಸಂತೋಷ್ ಕ್ಯಾಮೆರಾ ವರ್ಕ್.. ನಿಶ್ವಿಕಾ ನಾಯ್ಡು ಇನೋಸೆಂಟ್ ಆಕ್ಟಿಂಗ್.. ಟೋಟಲಿ ಟೀಸರ್ ಕಂಪ್ಲೀಟ್ ಎಂಟರ್ ಟ್ರೈನ್ ಮೆಂಟ್ ಪ್ಯಾಕ್ಡ್.
ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ಗಣೇಶ್ ಅದ್ಭುತವಾಗಿ ನಟಿಸಿದ್ದು, ಸದಾ ಡಿಫರೆಂಟ್ ಡೈಲಾಗ್ ಕೊಡೋ ಸುನಿ ಡೈಲಾಗ್ಸ್ ಬಗ್ಗೆ ಹೇಳೋ ಆಗಿಲ್ಲ. ಸಖತ್ ಪಂಚಿಂಗ್ ಡೈಲಾಗ್ ನೋಡುಗರನ್ನು ಬಿದ್ದು ಬಿದ್ದು ನಗಿಸುವಂತಿದೆ. ರಿಲೀಸ್ ಆದ ಕೆಲ ಗಂಟೆಗಳಲ್ಲಿಯೇ ಸಖತ್ ವೈರಲ್ ಆಗ್ತಿರೋ ಸಖತ್ ಟೀಸರ್, 2021ರ ಬೆಸ್ಟ್ ಕಾಮಿಡಿ ಟೀಸರ್ ಆಗಿ ಅನ್ನೋ ಬ್ರ್ಯಾಂಡ್ ತನ್ನದಾಗಿಸಿಕೊಂಡಿದೆ.
ಸಿಂಪಲ್ ಸುನಿ ಓಂಕಾರ ಹಾಕಿರುವ ಸಖತ್ ಸಿನಿಮಾದಲ್ಲಿ ಮುಗುಳುನಗೆ ಹುಡ್ಗ ಗಣಿ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಣೇಶ್ ಗೆ ಜೋಡಿಯಾಗಿ ಬೊಗಸೆ ಕಣ್ಗಳ ಚೆಲುವೆ ನಿಶ್ವಿಕಾ ನಾಯ್ಡು ಬಣ್ಣ ಹಚ್ಚಿದ್ದಾರೆ. ಇದೊಂದು ಕಾಮಿಡಿ ಕಂ ಕ್ರೈಮ್ ಥಿಲ್ಲರ್ ಶೈಲಿಯ ಸಿನಿಮಾ. ಟಿವಿ ರಿಯಾಲಿಟಿ ಶೋ, ಮರ್ಡರ್ ಹಾಗೂ ಕೋರ್ಟ್ ಕೇಸ್ ಸುತ್ತ ಇಡೀ ಸಿನಿಮಾವನ್ನು ಎಣೆಯಲಾಗಿದೆ.
ಕೆ ವಿ ಎನ್ ಪ್ರೊಡಕ್ಷನ್ ಬ್ಯಾನರ್ ನಡಿ ತಯಾರಾಗಿರುವ ಸಖತ್ ಸಿನಿಮಾಕ್ಕೆ ನಿಶಾ ವೆಂಕಟ್ ಕೋಣಂಕಿ ಮತ್ತು ಸುಪ್ರಿತ್ ಬಂಡವಾಳ ಹೂಡಿದ್ದಾರೆ. ಸಂತೋಷ್ ರೈ ಪಾತಾಜೆ ಕ್ಯಾಮೆರಾ ವರ್ಕ್, ಶಾಂತ ಕುಮಾರ್ ಸಂಕಲನ, ಜ್ಯೂಡ ಸ್ಯಾಂಡಿ ಸಂಗೀತ ಸಿನಿಮಾಕ್ಕಿದೆ. ಈಗಾಗಲೇ ಸೆನ್ಸಾರ್ ಮುಗಿಸಿರುವ ಸಖತ್ ಸಿನಿಮಾ ನವೆಂಬರ್ 12ರಂದು ಥಿಯೇಟರ್ ಅಂಗಳ ಪ್ರವೇಶಿಸಲಿದೆ.

administrator

Leave a Comment

Share via
Copy link
Powered by Social Snap