Kannada Beatz
News

“ವರದ”ನ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಶ್ರೀಮುರಳಿ

ವಿನೋದ್ ಪ್ರಭಾಕರ್ ಅಭಿನಯದ ಈ ಚಿತ್ರ ಸದ್ಯದಲ್ಲೇ ತೆರೆಗೆ.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ನಂದೀಶ್ ಅವರು ಬರೆದಿರುವ “ಓಂ ಹರಿ ಹರಿ ಓಂ” ಎಂಬ ಹಾಡನ್ನು “ಸರಿಗಮಪ” ಖ್ಯಾತಿಯ ಅಶ್ವಿನ್ ಶರ್ಮ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋವನ್ನು ನಟ ಶ್ರೀಮುರಳಿ ಬಿಡುಗಡೆ ಮಾಡಿದ್ದಾರೆ.

ಉದಯಪ್ರಕಾಶ್ ನಿರ್ದೇಶನ ಹಾಗೂ ಪ್ರದೀಪ್ ವರ್ಮ ಸಂಗೀತ ನೀಡಿರುವ ಈ ಹಾಡನ್ನು ಅಶ್ವಿನ್ ಶರ್ಮ ಸೊಗಸಾಗಿ ಹಾಡಿದ್ದಾರೆ. ವಿನೋದ್ ಪ್ರಭಾಕರ್ ಅವರು ತುಂಬಾ ಚೆನ್ನಾಗಿ ಕಾಣುತ್ತಿದ್ದಾರೆ. ಒಟ್ಟಾರೆ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಶ್ರೀಮುರಳಿ ಹಾರೈಸಿದ್ದಾರೆ.

ಜನವರಿ 28 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಕೊರೋನ ಕಾರಣದಿಂದ ಚಿತ್ರಮಂದಿರಗಳಲ್ಲಿ ಐವತ್ತರಷ್ಟು ಭರ್ತಿಗೆ ಮಾತ್ರ ಸರ್ಕಾರ ಒಪ್ಪಿಗೆ ನೀಡಿದೆ. ಹಾಗಾಗಿ ನೂರರಷ್ಟು ಭರ್ತಿಗೆ ಒಪ್ಪಿಗೆ ಸಿಕ್ಕ ಕೂಡಲೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎನ್ನುತ್ತಾರೆ ಉದಯಪ್ರಕಾಶ್.

“ರಾಬರ್ಟ್” ಚಿತ್ರದ ನಂತರ ವಿನೋದ್ ಪ್ರಭಾಕರ್ ನಟಿಸಿರುವ ಈ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ‌.

ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್.

ಕೆ.ಕಲ್ಯಾಣ್ , ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

ಹುಟ್ಟು ಬದುಕು ಸಾವು ನಡುವೆ ಏನೇನೋ

Kannada Beatz

ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಗ್ರೇ ಗೇಮ್ಸ್” ಗೆಲುವು

Kannada Beatz

ಅಪ್ಪ-ಮಗನ ಬಾಂಧವ್ಯಧ ಸನ್ನಿವೇಶಗಳನ್ನೊಳಗೊಂಡ ಕೌಟುಂಬಿಕ ಕಥಾಹಂದರ ಹೊಂದಿರುವ “S\O ಮುತ್ತಣ್ಣ” ಚಿತ್ರಕ್ಕೆ ಶಾಲಿನಿ ಆರ್ಟ್ಸ್ ಮೆಚ್ಚುಗೆ

Kannada Beatz

Leave a Comment

Share via
Copy link
Powered by Social Snap