Kannada Beatz
News

ಅಜಯ್ ರಾವ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಘೋಷಣೆ .

ಹರೀಶ್ ದೇವಿತಂದ್ರೆ ನಿರ್ಮಾಣದ ಈ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ .

ಜನವರಿ 24, ನಾಯಕ ಅಜಯ್ ರಾವ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಹೆಚ್ ಪಿ ಆರ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಹರೀಶ್ ದೇವಿತಂದ್ರೆ ನಿರ್ಮಿಸುತ್ತಿರುವ ಈ ಚೊಚ್ಚಲ ಚಿತ್ರವನ್ನು “ಮಳೆ” ಚಿತ್ರದ ಖ್ಯಾತಿಯ ಶಿವತೇಜಸ್ ನಿರ್ದೇಶಿಸುತ್ತಿದ್ದಾರೆ.

ಈ ಹಿಂದೆ ನಾನು ನಿರ್ದೇಶಿಸಿದ “ಧೈರ್ಯಂ” ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ನಟಿಸಿದ್ದರು ಹಾಗೂ “ದಿಲ್ ಪಸಂದ್” ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. . ಚಿತ್ರದ ಶೀರ್ಷಿಕೆ ಹಾಗೂ ಇತರ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಶಿವತೇಜಸ್ ತಿಳಿಸಿದ್ದಾರೆ.

Related posts

ಮೇ 6ಕ್ಕೆ ತೆರೆಗೆ ಬರುತ್ತಿದೆ “ದ್ವಿಮುಖ”.

Kannada Beatz

ಶರತ್ ಲೋಹಿತಾಶ್ವ ಅಭಿನಯದ ವೇಷಗಳು ಪೋಸ್ಟರ್ ಮತ್ತು ಟೀಸರ್ ಸೋಶಿಯಲ್ ಮೀಡಿಯಾಗಳಲ್ಲಿ ಬಿಡುಗಡೆಯಾಗಿದೆ

Kannada Beatz

ವಿಷ್ಣು ನೆನಪಲ್ಲಿ ಮತ್ತೆ ಶುರು YPL…ಮೇ‌4 ಮತ್ತು ಮೇ‌ 5ಕ್ಕೆ ಯಜಮಾನ ಪ್ರೀಮಿಯರ್ ಲೀಗ್

Kannada Beatz

Leave a Comment

Share via
Copy link
Powered by Social Snap