Kannada Beatz
News

ಅಜಯ್ ರಾವ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಘೋಷಣೆ .

ಹರೀಶ್ ದೇವಿತಂದ್ರೆ ನಿರ್ಮಾಣದ ಈ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ .

ಜನವರಿ 24, ನಾಯಕ ಅಜಯ್ ರಾವ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಹೆಚ್ ಪಿ ಆರ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಹರೀಶ್ ದೇವಿತಂದ್ರೆ ನಿರ್ಮಿಸುತ್ತಿರುವ ಈ ಚೊಚ್ಚಲ ಚಿತ್ರವನ್ನು “ಮಳೆ” ಚಿತ್ರದ ಖ್ಯಾತಿಯ ಶಿವತೇಜಸ್ ನಿರ್ದೇಶಿಸುತ್ತಿದ್ದಾರೆ.

ಈ ಹಿಂದೆ ನಾನು ನಿರ್ದೇಶಿಸಿದ “ಧೈರ್ಯಂ” ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ನಟಿಸಿದ್ದರು ಹಾಗೂ “ದಿಲ್ ಪಸಂದ್” ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. . ಚಿತ್ರದ ಶೀರ್ಷಿಕೆ ಹಾಗೂ ಇತರ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಶಿವತೇಜಸ್ ತಿಳಿಸಿದ್ದಾರೆ.

Related posts

ಜೂನ್ 3ಕ್ಕೆ ತೆರೆಮೇಲೆ ಸಂದೀಪ್ ಉನ್ನಿಕೃಷ್ಣನ್ ಜೀವನಚರಿತ್ರೆ ಮೇಜರ್ ರಿಲೀಸ್… ಬೆಂಗಳೂರಿನಲ್ಲಿ ಸಂದೀಪ್ ಅಭಿಮಾನಿಗಳಿಗಾಗಿ ಫ್ರೀ ಶೋ ಆಯೋಜಿಸಿದ್ದ ಚಿತ್ರತಂಡ

Kannada Beatz

ರಾಗಿಣಿ ಪ್ರಜ್ವಲ್ ಅಭಿನಯದ “ಶಾನುಭೋಗರ ಮಗಳು” ಚಿತ್ರ ಸದ್ಯದಲ್ಲೇ ತೆರೆಗೆ. .

Kannada Beatz

ನಮ್ ಟಾಕೀಸ್ ಅರ್ಪಿಸುವ ‘ಫ್ಯಾನ್ಸ್ ಕ್ರಿಕೆಟ್ ಲೀಗ್ – 8 ಪಂದ್ಯಾವಳಿ ಈ ಬಾರಿ ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿನಲ್ಲಿ ನಡೆಯಲಿದ್ದು

Kannada Beatz

Leave a Comment

Share via
Copy link
Powered by Social Snap