Kannada Beatz
News

ಅಭಿರಾಮಚಂದ್ರ’ ತಂಡದ ಮತ್ತೊಂದು ಪ್ರಯತ್ನ…’ದಿಂಸೋಲ್’ ಫಸ್ಟ್ ಲುಕ್ ಬಿಡುಗಡೆ

ಕರಾವಳಿಯ ಮತ್ತೊಂದು ಸಿನಿಮಾ…ಅಭಿರಾಮಚಂದ್ರ ಚಿತ್ರತಂಡದ ‘ದಿಂಸೋಲ್’ ಫಸ್ಟ್ ಲುಕ್ ಅನಾವರಣ

ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದರು. ಮೊದಲ ಚಿತ್ರದಲ್ಲಿ ಬಾಲ್ಯ, ಸ್ನೇಹದ ಜೊತೆಗೆ ತ್ರಿಕೋನ ಪ್ರೇಮಕಥೆ ಹೇಳಿದ್ದ ಅವರಿಗ ಕರಾವಳಿ ಸಂಸ್ಕೃತಿಯ ಸೊಗಡನ್ನು ದಿಂಸೋಲ್ ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ. ನಾಗೇಂದ್ರ ಗಾಣಿಗ ರಚಿಸಿ, ನಿರ್ದೇಶಿಸುತ್ತಿರುವ ಹೊಸ ಚಿತ್ರ ದಿಂಸೋಲ್ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

ಕರಾವಳಿ ಭಾಗದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ನಡೆಯುವ ಆಚರಣೆಯೇ ದಿಂಸೋಲ್ ದಿಂಸೋಲ್ ಹಾಗೂ ಕರಾವಳಿ ಎಲ್ಲ ಸಂಸ್ಕೃತಿಯನ್ನು ಈ ಚಿತ್ರದ ಮೂಲಕ ನಾಗೇಂದ್ರ ದೃಶ್ಯರೂಪಕ್ಕೆ ಇಳಿಸುತ್ತಿದ್ದಾರೆ. ಫಸ್ಟ್ ಲುಕ್ ಸಂಪೂರ್ಣ ಕೆಂಪು ಬಣ್ಣದಿಂದ ಕೂಡಿದೆ. ಆದಿದೇವಿಯು ರಕ್ತೇಶ್ವರಿ ಉಗ್ರ ಅವತಾರ ತಾಳಿದ್ದು, ಪೋಸ್ಟರ್ ನಾನಾ ಕಥೆ ಹೇಳುತ್ತಿದೆ.

ಅಭಿರಾಮಚಂದ್ರ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದ ರಥಕಿರಣ್ ಹಾಗೂ ಶಿವಾನಿ ರೈ ದಿಂಸೋಲ್ ಚಿತ್ರದಲ್ಲಿಯೂ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಮಾನಸಿ ಸುಧೀರ್, ದೇವದಾಸ್ ಕಾಪಿಕಾಡ್, ರಘು ಪಾಂಡೇಶ್ವರ್, ದೀಪಕ್ ರೈ ಪಣಾಜಿ, ಮೈಮ್ ರಾಮ್ ದಾಸ್, ಗಣೇಶ್ ಕಾರಂತ್, ಸೂರಜ್ ಹಾಗೂ ಸುರಭಿ ಹಾಗೂ ಕರಾವಳಿ ಭಾಗದ ಸಾಕಷ್ಟು ರಂಗಭೂಮಿ ಕಲಾವಿದರು ತಾರಾಬಳಗದಲ್ಲಿದ್ದಾರೆ. ಇದೇ ತಿಂಗಳ 6ರಂದು ಚಿತ್ರತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಿದ್ದು, ಡಿಸೆಂಬರ್ ತಿಂಗಳಲ್ಲಿ ಇಡೀ ಕರಾವಳಿ ಭಾಗದಲ್ಲಿ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

ದಿಂಸೋಲ್ ಸಿನಿಮಾಗೆ ಸಂದೀಪ್ ವಲ್ಲೂರಿ ಛಾಯಾಗ್ರಹಣ, ಪ್ರತೀಕ್ ಶೆಟ್ಟಿ ಸಂಕಲನ, ನಾಗೇಂದ್ರ ಗಾಣಿಗ ಸಾಹಿತ್ಯ, ಸಂಭಾಷಣೆ ಬರೆಯುತ್ತಿದ್ದು, ಕೆಜಿಎಫ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರ್ ಸಂಗೀತ ನಿರ್ದೇಶನ ಚಿತ್ರಕ್ಕೆ ಇರಲಿದೆ. ಸಂಹಿತಾ ಪ್ರೊಡಕ್ಷನ್ ನಡಿ ದಿಂಸೋಲ್ ಚಿತ್ರ ಮೂಡಿಬರಲಿದೆ.

Related posts

‘ದೇವರು ರುಜು ಮಾಡಿದನು’ ಸಿನಿಮಾದ ಮುಹೂರ್ತ ಸಂಭ್ರಮ…ಯುವ ಪ್ರತಿಭೆಗಳ ಜೊತೆ ಸಿಂಪಲ್ ಸುನಿ ಹೊಸ ಪಯಣ

Kannada Beatz

ಟಿವಿ9 ಸುದ್ದಿವಾಹಿನಿಯ ವತಿಯಿಂದ ಹೆಮ್ಮೆಯ ಕನ್ನಡತಿ ಪ್ರಶಸ್ತಿ

Kannada Beatz

ಕಲರ್ ಫುಲ್ ಕರುನಾಡ ಸಂಭ್ರಮಕ್ಕೆ ತೆರೆ- ಗೆಲುವು ಕನ್ನಡ ಗೆಳೆಯರ ಬಳಗದಿಂದ ಚಿರು ಸರ್ಜಾಗೆ ಮರಣೋತ್ತರ ‘ಕನ್ನಡ‌ ಕಲಾ ಭೂಷಣ’ ಪ್ರಶಸ್ತಿ.

Kannada Beatz

Leave a Comment

Share via
Copy link
Powered by Social Snap