Kannada Beatz
News

ನಟ ಶರಣ್ ಅವರಿಂದ “ಜಲಂಧರ” ಚಿತ್ರದ “ಸಂತೆಯ ದಾರಿಯಲ್ಲಿ” ಹಾಡಿನ ಅನಾವರಣ .

ಪ್ರಮೋದ್ ಶೆಟ್ಟಿ ಹಾಗೂ ಸ್ಟೆಪ್ ಆಫ್ ಲೋಕಿ ಅಭಿನಯದ ಈ ಚಿತ್ರ ಸದ್ಯದಲ್ಲೇ ತೆರೆಗೆ .

“ಲಾಫಿಂಗ್ ಬುದ್ದ” ನಾಗಿ ಜನರ ಮನಸ್ಸಿಗೆ ಹತ್ತಿರವಾಗಿರುವ ಪ್ರಮೋದ್ ಶೆಟ್ಟಿ ಈಗ “ಜಲಂಧರ”ನಾಗಿ ಬರುತ್ತಿದ್ದಾರೆ. ಸ್ಟೆಪ್ ಆಫ್ ಲೋಕಿ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ “ಸಂತೆಯ ದಾರಿಯಲ್ಲಿ” ಎಂಬ ಮನಮೋಹಕ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದ್ದು, ಖ್ಯಾತ ನಟ ಶರಣ್ ಈ ಹಾಡನ್ನು ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಸುಪ್ರೀತ್ ಶರ್ಮ ಎಸ್ ಬರೆದು, ಜತಿನ್ ದರ್ಶನ್ ಸಂಗೀತ ನೀಡಿರುವ ಈ ಹಾಡನ್ನು ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಹಾಗೂ ಮಾಧುರಿ ಶೇಷಾದ್ರಿ ಹಾಡಿದ್ದಾರೆ. ಶೇಷು ಅವರ ನೃತ್ಯ ನಿರ್ದೇಶನದಲ್ಲಿ ಸ್ಟೆಪ್ ಆಫ್ ಲೋಕಿ ಹಾಗೂ ಆರೋಹಿತ ಗೌಡ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಗ್ರಾಮೀಣ ಸುಂದರ ಪರಿಸರದಲ್ಲಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ಸ್ಟೆಪ್ ಅಪ್ ಪಿಕ್ಚರ್ಸ್ ಲಾಂಛನದಲ್ಲಿ ಮದನ್ ಎಸ್ ನಿರ್ಮಿಸಿರುವ ಈ ಚಿತ್ರಕ್ಕೆ ಚಂದ್ರಮೋಹನ್ ಸಿ ಎಲ್, ರಮೇಶ್ ರಾಮಚಂದ್ರ , ಪದ್ಮನಾಭನ್ ಮಂಗುದೊಡ್ಡಿ ಅವರ ಸಹ ನಿರ್ಮಾಣವಿದೆ. ರಶ್ಮಿತ್ ಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ಹಿಹಿಸಿದ್ದಾರೆ.

ಹಲವು ಚಿತ್ರಗಳಲ್ಲಿ ಕ್ರಿಯೇಟಿವ್ ಹೆಡ್ ಹಾಗೂ ಸಹ ನಿರ್ದೇಶಕರು ಆಗಿ ಕೆಲಸ ಮಾಡಿ ಅನುಭವವಿರುವ ವಿಷ್ಣು ವಿ ಪ್ರಸನ್ನ “ಜಲಂಧರ” ಚಿತ್ರದ ನಿರ್ದೇಶಕರು. ರಂಗಭೂಮಿ ಹಿನ್ನೆಲೆಯಿರುವ ನಟ ಸ್ಟೆಪ್ ಆಫ್ ಲೋಕಿ‌ “ಜಲಂಧರ” ಚಿತ್ರದ ಕಥೆ ಬರೆದಿದ್ದು, ಚಿತ್ರಕಥೆಯನ್ನು ವಿಷ್ಣು ವಿ ಪ್ರಸನ್ನ ಹಾಗೂ ಅಕ್ಷಯ್ ಕುಮಾರ್ ಬರೆದಿದ್ದಾರೆ. ಸಂಭಾಷಣೆ ಶ್ಯಾಮ್ ಸುಂದರ್ ಅವರದು. ಛಾಯಾಗ್ರಹಣವನ್ನು ಕೇರಳ ಮೂಲದ ಸರಿನ್ ರವೀಂದ್ರನ್ ಮತ್ತು ವಿದ್ಯಾ ಶಂಕರ್ ಪಿ ಎಸ್ ಹಾಗೂ ಸಂಪೂರ್ಣ ಸಂಗೀತ ನಿರ್ದೇಶನವನ್ನು ಯುವ ಸಂಗೀತ ನಿರ್ದೇಶಕ ಜಿ. ಜತಿನ್ ದರ್ಶನ್ ನಿರ್ವಹಿಸಿದ್ದಾರೆ, ವೆಂಕಿ ಯು ಡಿ ವಿ ಸಂಕಲನ ಮಾಡಿದ್ದಾರೆ.

ಪ್ರಮೋದ್ ಶೆಟ್ಟಿ, ಸ್ಟೆಪ್ ಆಫ್ ಲೋಕಿ, ರುಷಿಕಾ ರಾಜ್(ಟಗರು ಸರೋಜ), ಆರೋಹಿತಾ ಗೌಡ(ಅಧ್ಯಕ್ಷ) , ಬಲ ರಾಜ್ವಾಡಿ, ರಘು ರಾಮನಕೊಪ್ಪ , ನವೀನ್ ಸಾಗರ್ , ಪ್ರತಾಪ್ ನೆನಪು , ಆದಿ ಕೇಶವರೆಡ್ಡಿ, ಭೀಷ್ಮಾ ರಾಮಯ್ಯ , ವಿಜಯರಾಜ್ , ಪ್ರಸಾದ್, ವಿಶಾಲ್ ಪಾಟೀಲ್ ಮತ್ತು ಅಂಬು “ಜಲಂಧರ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Related posts

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

Kannada Beatz

‘ರೋಲೆಕ್ಸ್’ ಆದ ನಟ ಕೋಮಲ್ -ಶ್ರೀನಿವಾಸ್ ಮಂಡ್ಯ ನಿರ್ದೇಶನದ ನೂತನ ಚಿತ್ರ

Kannada Beatz

Leave a Comment

Share via
Copy link
Powered by Social Snap