Kannada Beatz
News

ವಸಿಷ್ಠ ಸಿಂಹ ‘ಲವ್ ಲಿ’ ಗೆ ಜೋಡಿಯಾದ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್

ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್ ಲಿ’ ಯಾಗಿ ಕಾಣಿಸಿಕೊಳ್ಳುತ್ತಿರೋದು ನಿಮಗೆಲ್ಲ ಗೊತ್ತೇ ಇದೆ. ವಸಿಷ್ಠ ನಾಯಕ ನಟನಾಗಿ ನಟಿಸುತ್ತಿರುವ ‘ಲವ್ ಲಿ’ ಸೆಟ್ಟೇರಿ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಅಪ್ ಡೇಟ್ ಗಳು ಕೂಡ ಗಮನ ಸೆಳೆಯುತ್ತಿವೆ.

ಈ ಚಿತ್ರಕ್ಕೆ ವಸಿಷ್ಠ ಸಿಂಹ ಜೊತೆ ತೆರೆ ಹಂಚಿಕೊಳ್ಳುವರ್ಯಾರು ಎಂಬ ಕುತೂಹಲ ಎಲ್ಲರಲ್ಲಿತ್ತು. ಆ ಕುತೂಹಲಕ್ಕೀಗ ಬ್ರೇಕ್ ಬಿದ್ದಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಆಯ್ಕೆಯಾಗಿದ್ದಾರೆ. ಹಿಂದಿ, ಕೊರಿಯನ್, ತಮಿಳು ಭಾಷೆಗಳ ಸಿನಿಮಾ ಮತ್ತು ವೆಬ್ ಸಿರೀಸ್ ಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ. ಈಗಾಗಲೇ ಸ್ಟೆಫಿ ಪಟೇಲ್ ‘ಲವ್ ಲಿ’ ಚಿತ್ರತಂಡ ಸೇರಿಕೊಂಡಿದ್ದು ಜುಲೈ 19ರಿಂದ ಚಿತ್ರದ ಸೆಕೆಂಡ್ ಶೆಡ್ಯೂಲ್ ಆರಂಭವಾಗಲಿದೆ. ವಸಿಷ್ಠ ಸಿಂಹ ಹಾಗೂ ಸ್ಟೆಫಿ ಕಾಂಬಿನೇಶನ್ ಒಳಗೊಂಡ ಪೋಸ್ಟರ್ ಜುಲೈ 21ರಂದು ಚಿತ್ರತಂಡ ರಿವೀಲ್ ಮಾಡಲಿದೆ.

‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಹರೀಶ್ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ‘ಲವ್ ಲಿ’ ಚಿತ್ರಕ್ಕಿದೆ.

Related posts

ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ “ಉಡಾಳ” .

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

‘ಡಂಕಿ’ ಡ್ರಾಪ್-3 ಔಟ್..ಶಾರುಖ್ ಖಾನ್ ಹಾಗೂ ಸ್ನೇಹಿತರ ಎಮೋಷನಲ್ ಪಯಣದ ಹಾಡು ನೋಡಿ

Kannada Beatz

Leave a Comment

Share via
Copy link
Powered by Social Snap