Kannada Beatz
News

ಬಿಡುಗಡೆಯಾಯಿತು “ನಿದ್ರಾದೇವಿ Next Door” ಚಿತ್ರದ ಶೀರ್ಷಿಕೆ ಹಾಡು .

“ಅಮ್ಮ – ಮಗನ ಬಾಂಧವ್ಯದ ಹಾಡಿಗೆ ತಲೆದೂಗುತ್ತಿದೆ ಕರುನಾಡು .*.

ಸೆಪ್ಟೆಂಬರ್ 12 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ .

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ಹಾಗೂ ಪ್ರವೀರ್ – ರಿಷಿಕಾ ನಾಯಕ – ನಾಯಕಿಯಾಗಿ ನಟಿಸಿರುವ “ನಿದ್ರಾದೇವಿ next door” ಚಿತ್ರಕ್ಕಾಗಿ ಪವನ್ ಭಟ್ ಅವರು ಬರೆದಿರುವ “ನಿದ್ರಾದೇವಿ ಬಾ” ಎಂಬ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು. ನಕುಲ ಅಭಯಂಕರ್ ಸಂಗೀತ ನೀಡಿರುವ ಈ ಹಾಡನ್ನು ಶ್ರೀಲಕ್ಷ್ಮೀ ಬೆಳ್ಮಣು ಹಾಡಿದ್ದಾರೆ.
ತಾಯಿ – ಮಗನ ಬಾಂಧವ್ಯದ ಈ ಹಾಡಿನಲ್ಲಿ ಹಿರಿಯ ನಟಿ ಸುಧಾರಾಣಿ ಹಾಗೂ ಮಾಸ್ಟರ್ ಸುಜಯ್ ಅಭಿನಯಿಸಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದು ನಮ್ಮ ಸಂಸ್ಥೆಯ ನಿರ್ಮಾಣದ ಮೂರನೇ ಸಿನಿಮಾ.‌ ನಿರ್ದೇಶಕರು ಈ ಚಿತ್ರದ ಕಥೆ ಹೇಳಿದಾಗ ತಾಯಿ ಪಾತ್ರದಲ್ಲಿ ಸುಧಾರಾಣಿ ಅವರು ಅಭಿನಯಿಸುತ್ತಾರೆ ಎಂದು ಹೇಳಿದಾಗ ಬಹಳ ಖುಷಿಯಾಯಿತು. ವಿಶೇಷವೆಂದರೆ ಸುಧಾರಾಣಿ ಅವರ ಜೊತೆಗೆ ನನ್ನ ಮಗ ಮಾಸ್ಟರ್ ಸುಜಯ್ ಕೂಡ ಅಭಿನಯಿಸಿದ್ದಾನೆ. ಸೆಪ್ಟೆಂಬರ್ 12ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಜಯರಾಮ್ ದೇವಸಮುದ್ರ ತಿಳಿಸಿದರು.

ಸಾಮಾನ್ಯವಾಗಿ ತಂದೆಗೆ ಮಗಳ ಮೇಲೆ, ತಾಯಿಗೆ ಮಗನ ಮೇಲೆ ಪ್ರೀತಿ ಜಾಸ್ತಿ ‌ಎಂಬುವುದು ವಾಡಿಕೆ. ಇಂದು ನಮ್ಮ ಚಿತ್ರದ ತಾಯಿ – ಮಗನ ಬಾಂಧವ್ಯ ಸಾರುವ “ನಿದ್ರಾದೇವಿ ಬಾ” ಎಂಬ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಶ್ರೀದೇವಿ ಬೆಳ್ಮಣು ಅವರು ಸುಶ್ರಾವ್ಯವಾಗಿ ಹಾಡಿದ್ದಾರೆ. ಸುಧಾರಾಣಿ ಹಾಗೂ ಮಾಸ್ಟರ್ ಸುಜಯ್ ಅಭಿನಯಿಸಿದ್ದಾರೆ. ಡಾ||ವಿಷ್ಣುವರ್ಧನ್ ಅಭಿನಯದ ಜನಪ್ರಿಯ “ಜೋ ಜೋ ಲಾಲಿ” ಎಂಬ ಹಾಡಿನಲ್ಲಿ “ನಿದ್ರಾದೇವಿ ಬಾ” ಎಂಬ ಪದವಿದೆ. ಆ ಪದವೇ ಈ ಹಾಡಿಗೆ ಸ್ಪೂರ್ತಿ. ಇನ್ನೂ ನಮ್ಮ ಚಿತ್ರ ಸೆಪ್ಟೆಂಬರ್ 12 ರಂದು ಬಿಡುಗಡೆಯಾಗುತ್ತಿದೆ‌. ನೋಡಿ ಹಾರೈಸಿ ಎಂದರು ನಿರ್ದೇಶಕ ಸುರಾಗ್.

ನಿರ್ದೇಶಕ ಸುರಾಗ್ ಅವರು ಈ ಚಿತ್ರದ ಕಥೆ ಹೇಳಿದಾಗ ಪಾತ್ರ ಇಷ್ಟವಾಯಿತು. ಕೆಲವರು ಕಥೆ ಹೇಳಬೇಕಾದರೆ ಆ ಪಾತ್ರ ಒಂದು ರೀತಿ, ಆಮೇಲೆ ಬೇರೆ ರೀತಿಯೇ ಇರುತ್ತದೆ. ಆದರೆ ಸುರಾಗ್ ಅವರು ಕಥೆ ಹೇಳಿದ ಹಾಗೆಯೇ ಪಾತ್ರವನ್ನು ತೆರೆಯ ಮೇಲೆ ತಂದಿದ್ದಾರೆ. ತಾಯಿ – ಮಗನ ಬಾಂಧವ್ಯದ ಹಾಡು ತುಂಬಾ ಚೆನ್ನಾಗಿದೆ. ಒಂದೊಳ್ಳೆ ಕಂಟೆಂಟ್ ವುಳ್ಳ ಚಿತ್ರವನ್ನು ಜನ ನೋಡೇ ನೋಡುತ್ತಾರೆ ಎಂಬುದಕ್ಕೆ “ಸು ಫ್ರಮ್ ಸೋ” ಚಿತ್ರವೇ ಸಾಕ್ಷಿ. ಅದೇ ರೀತಿ ಉತ್ತಮ ಕಂಟೆಂಟ್ ವುಳ್ಳ “ನಿದ್ರಾದೇವಿ next door” ಚಿತ್ರ ಸಹ ಭರ್ಜರಿ ಯಶಸ್ಸು ಕಾಣಲಿ ಎಂದು ನಟಿ ಸುಧಾರಣಿ ಹಾರೈಸಿದರು.

ನಮ್ಮ ಇಡೀ ಕುಟುಂಬದವರು ಸುಧಾರಾಣಿ ಅವರ ಅಭಿಮಾನಿಗಳು. ಅವರ ಜೊತೆಗೆ ನಾನು ಈ ಚಿತ್ರದಲ್ಲಿ ನಟಿಸುತ್ತಿರುವುದು ಬಹಳ ಖುಷಿಯಾಗಿದೆ. ಇನ್ನೂ ಇಂದು ಬಿಡುಗಡೆಯಾಗಿರುವ “ನಿದ್ರಾದೇವಿ ಬಾ” ಹಾಡು ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯಲ್ಲಿ ಚೆನ್ನಾಗಿ ಮೂಡಿಬಂದಿದೆ ಎಂದರು.

ನಾನು ಈ ಹಿಂದೆ “ಜ್ಯೂಲಿ” ಚಿತ್ರದಲ್ಲಿ ಸುಧಾರಾಣಿ ಅವರೊಂದಿಗೆ ಅಭಿನಯಿಸಿದ್ದೆ. ಇದು ನಾನು ಅವರ ಜೊತೆಗೆ ಅಭಿನಯಿಸುತ್ತಿರುವ ಎರಡನೇ ಚಿತ್ರ. ಅವರ ಜೊತೆಗೆ ನಟಿಸಿದ್ದು ಖುಷಿಯಾಗಿದೆ. ಇಂದು ಬಿಡುಗಡೆಯಾಗುರುವ ಹಾಡು ಚೆನ್ನಾಗಿದೆ ಎಂದರು ನಾಯಕಿ ರಿಶಿಕಾ.

“ಮಣ್ಣಿನ ದೋಣಿ” ಚಿತ್ರದ ಸಮಾರಂಭವೊಂದರಲ್ಲಿ ಅಂಬರೀಶ್ ಹಾಗೂ ಸುಧಾರಾಣಿ ಅವರನ್ನು ನೋಡಿದ್ದನ್ನು ನೆನಪಿಸಿಕೊಂಡು ಮಾತನಾಡಿದ ಪ್ರವೀಣ್ ಶೆಟ್ಟಿ(ಕರವೇ), ಅವರು ತಮ್ಮ ಮಗ ಚಿತ್ರದ ನಾಯಕ ಪ್ರವೀರ್ ಶೆಟ್ಟಿ, ಈ ಚಿತ್ರಕ್ಕಾಗಿ ಪಟ್ಟಿರುವ ಶ್ರಮದ ಬಗ್ಗೆ ಹೇಳಿದರು. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

Related posts

“ಸಂಸಾರ ಸಾಗರ”ದಲ್ಲಿ ಕಲಾವಿದರ ದಂಡು.

Kannada Beatz

ಕೊಡಗಿನ‌ ಹುಡುಗ ಪ್ರಮೋದ್ ಬೋಪಣ್ಣ ಇದೀಗ ಚಂದನವನದ ನಾಯಕ

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

Leave a Comment

Share via
Copy link
Powered by Social Snap