Kannada Beatz
News

ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದರು “ರಾಣ” ಟೀಸರ್.


ರಿಯಲ್ ಸ್ಟಾರ್ ಉಪೇಂದ್ರ ಅವರು ಶ್ರೇಯಸ್ಸ್ ಕೆ ಮಂಜು ಅಭಿನಯದ “ರಾಣ” ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು.

ಶ್ರೇಯಸ್ಸ್ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು. ತಂದೆಯನ್ನು ಮೀರಿಸಿದ ಮಗ ಶ್ರೇಯಸ್ಸ್. ಅವನಿಗೆ ಹಾಗೂ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಉಪೇಂದ್ರ ಹರಸಿದರು.

ಕಂಪ್ಲಿ ಶಾಸಕರಾದ J.N ಗಣೇಶ್ ಅವರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟೀಸರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ಚಿತ್ರೀಕರಣ ಬಹುತೇಕ ಮುಗಿದಿದೆ. ಕೋವಿಡ್ ನಿಯಮಾವಳಿಗಳು ಜಾರಿಯಿರುವುದರಿಂದ ಕೆಲವು ಜಾಗಗಳಲ್ಲಿ ಚಿತ್ರೀಕರಣ ನಡೆಸಲು ಅನುಮತಿ ಸಿಕ್ಕಿದ್ದು ತಡವಾಯಿತು. ಇಲ್ಲದಿದ್ದರೆ, ನಮ್ಮ ಚಿತ್ರ ಈ ವೇಳೆಗೆ ಸಿದ್ದವಿರುತ್ತಿತ್ತು. ಚಿತ್ರ ಉತ್ತಮವಾಗಿ ಬರಲು ಸಹಕರಿಸುತ್ತಿರುವ ಚಿತ್ರತಂಡದ ಸದಸ್ಯರಿಗೆ ನನ್ನ ಧನ್ಯವಾದ ಎಂದರು ನಿರ್ದೇಶಕ ನಂದಕಿಶೋರ್‌ .

ಚಿತ್ರದ ಹಾಡುಗಳು ಚೆನ್ನಾಗಿದೆ. ಹಾಡುಗಳ ವಿಡಿಯೋ ಯಾವಾಗ ಬರುವುದೋ ಎಂದು ಕಾತುರದಿಂದ ಕಾಯುತ್ತಿದ್ದೇನೆ.. ಚಿತ್ರತಂಡಕ್ಕೆ ಹಾಗೂ ಆಡಿಯೋ ಹಕ್ಕು ಪಡೆದಿರುವ ಆನಂದ್ ಆಡಿಯೋ ಸಂಸ್ಥೆಗೆ ಧನ್ಯವಾದ ತಿಳಿಸಿದರು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ.

ನಾನು ಚಿಕ್ಕ ವಯಸ್ಸಿನಿಂದಲೂ ಉಪೇಂದ್ರ ಅವರ ಹುಚ್ಚು ಅಭಿಮಾನಿ. ನಾನು ಅವರಿಂದ ಕಲತಿರುವುದು ಸಾಕಷ್ಟು. ಚಿತ್ರರಂಗಕ್ಕೆ ಹೊಸದಾಗಿ ಬರುತ್ತಿರುವ ನೂತನ ಪ್ರತಿಭೆಗಳಿಗೆ ಅವರು ನೀಡುವ ಪ್ರೋತ್ಸಾಹಕ್ಕೆ ಚಿರ ಋಣಿ. ಶಿವರಾಜಕುಮಾರ್ ಅವರು ಸಹ ನನಗೆ ಈ ಚಿತ್ರದಲ್ಲಿ ಲಾಂಗ್ ಹಿಡಿಯುವುದನ್ನು ಹೇಳಿಕೊಟ್ಟಿದ್ದಾರೆ. ನಾನು ಏನಾದರೂ ಉತ್ತಮವಾಗಿ ನಟಿಸಿದ್ದೇನೆಂದರೆ ಅದಕ್ಕೆ ಕಾರಣ ನಿರ್ದೇಶಕ ನಂದಕಿಶೋರ್ ಹಾಗೂ ಛಾಯಾಗ್ರಹಕ ಛಾಯಾಗ್ರಹಕ ಶೇಖರ್ ಚಂದ್ರ. ಹಿರಿಯ ಕಲಾವಿದರಿಗೆ, ನಿರ್ಮಾಪಕರಿಗೆ, ನನ್ನ ಅಪ್ಪ ಕೆ.ಮಂಜು ಅವರಿಗೆ ಹಾಗೂ ಇಡೀ ತಂಡಕ್ಕೆ ನಾಯಕ ಶ್ರೇಯಸ್ಸ್ ವಿಶೇಷ ಧನ್ಯವಾದ ತಿಳಿಸಿದರು.

ನಾನು ಚಿತ್ರ ನಿರ್ಮಾಣ ಮಾಡಲು ಪ್ರಮುಖ ಕಾರಣ ಕೆ.ಮಂಜು. ಅವರಿಗೆ ನಾನು ಆಭಾರಿ. ಚಿತ್ರ ಉತ್ತಮವಾಗಿ ಮೂಡಿ ಬರಲು ಇಡೀ ತಂಡ ಸಾಕಷ್ಟು ಶ್ರಮಿಸುತ್ತಿದೆ. ನಿಮ್ನೆಲ್ಲರ ಹಾರೈಕೆ ನಮಗಿರಲಿ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್.

ನಿರ್ಮಾಪಕ ಪುರುಷೋತ್ತಮ್ ನನಗೆ ಒಳ್ಳೆಯ ಸ್ನೇಹಿತರು. ಈ ಚಿತ್ರವನ್ನು ನನ್ನದೇ ನಿರ್ಮಾಣದ ಚಿತ್ರದ ತರಹ ನಿಂತು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದೇನೆ. ಉಪೇಂದ್ರ‌ ಅವರು ಮುಹೂರ್ತ ದಿನದಂದು ಬಂದು ಶುಭ ಹಾರೈಸಿದ್ದರು. ಟೀಸರ್ ಸಹ
ಅವರಿಂದಲೇ ಬಿಡುಗಡೆ ಮಾಡಿಸಬೇಕು ಎನ್ನುವ ಆಸೆಯಿತ್ತು. ಬಿಡುಗಡೆ ಮಾಡಿ ಕೊಟ್ಟಿದ್ದಾರೆ. ಉಪೇಂದ್ರ ಅವರಿಗೆ ತುಂಬು ಹೃದಯದ ಧನ್ಯವಾದ. ನನ್ನ ಮಗ ಶ್ರೇಯಸ್ಸ್, ನಿರ್ದೇಶಕ ನಂದಕಿಶೋರ್ ಸೇರಿದಂತೆ ಇಡೀ ಚಿತ್ರತಂಡದ ಸದಸ್ಯರಿಗೆ ಒಳ್ಳೆಯದಾಗಲಿ ಎಂದರು ನಿರ್ಮಾಪಕ ಕೆ.ಮಂಜು.
ನಾಯಕಿಯರಾದ ರೀಷ್ಮಾ ನಾಣಯ್ಯ, ರಜನಿ ಭಾರದ್ವಾಜ್, ಛಾಯಾಗ್ರಹಕ ಶೇಖರ್ ಚಂದ್ರ, ಆನಂದ್ ಆಡಿಯೋ ಶ್ಯಾಮ್ ಅವರು ಚಿತ್ರದ ಬಗ್ಗೆ ಮಾತನಾಡಿದ್ದರು. ನಿರ್ಮಾಪಕರಾದ ರಮೇಶ್ ರೆಡ್ಡಿ ಅವರು ಸೇರಿದಂತೆ ಅನೇಕ ಗಣ್ಯರು ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಚಿತ್ರದಲ್ಲಿ ಶ್ರೇಯಸ್ಸ್ ಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ.

ಕೆ ಮಂಜು ಅರ್ಪಿಸುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ “ರಾಣ” ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ‌.

Related posts

ಭರ್ಜರಿ ಮೊತ್ತಕ್ಕೆ ಸೇಲ್ ಆಯಿತು “ಭರ್ಜರಿ ಗಂಡು”ಹಿಂದಿ ರೈಟ್ಸ್.

Kannada Beatz

ಈ ಕೆಲಸ ಮಾಡಿದ್ದಕ್ಕೆ KXIP ತಂಡದ ಮಾಲೀಕರಿಗೆ 2 ವರ್ಷ ಜೈಲು ಶಿಕ್ಷೆ..! ಯಾಕೆ ಗೊತ್ತಾ? ಈ ಸುದ್ದಿ ಓದಿ

administrator

ಚಮಕ್ ಜೋಡಿ ‘ಸಖತ್’ ಟೀಸರ್ ರಿಲೀಸ್…ಇದು ಸಿಂಪಲ್ ಸುನಿ ಡೈಲಾಗ್ ಸ್ಪೆಷಲ್!
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಮೋಸ್ಟ್ ಅವೇಟೇಡ್ ಸಿನಿಮಾ ಸಖತ್. ಪೋಸ್ಟರ್ ಹಾಗೂ ಸಾಂಗ್ ಮೂಲಕವೇ ಹೊಸತನ ತೆರೆದಿಟ್ಟಿರೋ ಸಖತ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಗಣೇಶ್ ಸ್ಟೈಲೀಶ್ ಲುಕ್.. ಸುನಿ ಡೈಲಾಗ್ ಕಿಕ್.. ಜೂಡಾ ಸ್ಯಾಂಡಿ ಮ್ಯೂಸಿಕ್.. ಸಂತೋಷ್ ಕ್ಯಾಮೆರಾ ವರ್ಕ್.. ನಿಶ್ವಿಕಾ ನಾಯ್ಡು ಇನೋಸೆಂಟ್ ಆಕ್ಟಿಂಗ್.. ಟೋಟಲಿ ಟೀಸರ್ ಕಂಪ್ಲೀಟ್ ಎಂಟರ್ ಟ್ರೈನ್ ಮೆಂಟ್ ಪ್ಯಾಕ್ಡ್.
ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ಗಣೇಶ್ ಅದ್ಭುತವಾಗಿ ನಟಿಸಿದ್ದು, ಸದಾ ಡಿಫರೆಂಟ್ ಡೈಲಾಗ್ ಕೊಡೋ ಸುನಿ ಡೈಲಾಗ್ಸ್ ಬಗ್ಗೆ ಹೇಳೋ ಆಗಿಲ್ಲ. ಸಖತ್ ಪಂಚಿಂಗ್ ಡೈಲಾಗ್ ನೋಡುಗರನ್ನು ಬಿದ್ದು ಬಿದ್ದು ನಗಿಸುವಂತಿದೆ. ರಿಲೀಸ್ ಆದ ಕೆಲ ಗಂಟೆಗಳಲ್ಲಿಯೇ ಸಖತ್ ವೈರಲ್ ಆಗ್ತಿರೋ ಸಖತ್ ಟೀಸರ್, 2021ರ ಬೆಸ್ಟ್ ಕಾಮಿಡಿ ಟೀಸರ್ ಆಗಿ ಅನ್ನೋ ಬ್ರ್ಯಾಂಡ್ ತನ್ನದಾಗಿಸಿಕೊಂಡಿದೆ.
ಸಿಂಪಲ್ ಸುನಿ ಓಂಕಾರ ಹಾಕಿರುವ ಸಖತ್ ಸಿನಿಮಾದಲ್ಲಿ ಮುಗುಳುನಗೆ ಹುಡ್ಗ ಗಣಿ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಣೇಶ್ ಗೆ ಜೋಡಿಯಾಗಿ ಬೊಗಸೆ ಕಣ್ಗಳ ಚೆಲುವೆ ನಿಶ್ವಿಕಾ ನಾಯ್ಡು ಬಣ್ಣ ಹಚ್ಚಿದ್ದಾರೆ. ಇದೊಂದು ಕಾಮಿಡಿ ಕಂ ಕ್ರೈಮ್ ಥಿಲ್ಲರ್ ಶೈಲಿಯ ಸಿನಿಮಾ. ಟಿವಿ ರಿಯಾಲಿಟಿ ಶೋ, ಮರ್ಡರ್ ಹಾಗೂ ಕೋರ್ಟ್ ಕೇಸ್ ಸುತ್ತ ಇಡೀ ಸಿನಿಮಾವನ್ನು ಎಣೆಯಲಾಗಿದೆ.
ಕೆ ವಿ ಎನ್ ಪ್ರೊಡಕ್ಷನ್ ಬ್ಯಾನರ್ ನಡಿ ತಯಾರಾಗಿರುವ ಸಖತ್ ಸಿನಿಮಾಕ್ಕೆ ನಿಶಾ ವೆಂಕಟ್ ಕೋಣಂಕಿ ಮತ್ತು ಸುಪ್ರಿತ್ ಬಂಡವಾಳ ಹೂಡಿದ್ದಾರೆ. ಸಂತೋಷ್ ರೈ ಪಾತಾಜೆ ಕ್ಯಾಮೆರಾ ವರ್ಕ್, ಶಾಂತ ಕುಮಾರ್ ಸಂಕಲನ, ಜ್ಯೂಡ ಸ್ಯಾಂಡಿ ಸಂಗೀತ ಸಿನಿಮಾಕ್ಕಿದೆ. ಈಗಾಗಲೇ ಸೆನ್ಸಾರ್ ಮುಗಿಸಿರುವ ಸಖತ್ ಸಿನಿಮಾ ನವೆಂಬರ್ 12ರಂದು ಥಿಯೇಟರ್ ಅಂಗಳ ಪ್ರವೇಶಿಸಲಿದೆ.

administrator

Leave a Comment

Share via
Copy link
Powered by Social Snap