Kannada Beatz
News

ನವರಸನಾಯಕ ಈಗ ರಂಗನಾಯಕ


ಮಾರ್ಚ್ 8ಕ್ಕೆ‌ಆಟ ಶುರು ನವರಸ ನಾಯಕ ಜಗ್ಗೇಶ್ ಅಭಿನಯದ, ಮಠ ಗುರುಪ್ರಸಾದ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ರಂಗನಾಯಕ ಮಾರ್ಚ್ ೮ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲಿದೆ. ಪುಷ್ಪಕ ವಿಮಾನ ಖ್ಯಾತಿಯ ನಿರ್ಮಾಪಕ‌ ವಿಖ್ಯಾತ್ ಅವರು ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಮಠ , ಎದ್ದೇಳು ಮಂಜುನಾಥ ಚಿತ್ರಗಳ ಮೂಲಕ ಹೊಸ ದಾಖಲೆಯನ್ನೇ‌‌ ಸೃಷ್ಟಿಸಿದ್ದ ‌ಗುರುಪ್ರಸಾದ್ ಜಗ್ಗೇಶ್ ಜೋಡಿ ನಗುವಿನ ಅಲೆ ಎಬ್ಬಿಸಲು ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ. ಶಿವರಾತ್ರಿಯ ವಿಶೇಷವಾಗಿ ಈ ಚಿತ್ರ ಮಾರ್ಚ್ 8ರಂದು ಬಿಡುಗಡೆಯಾಗುತ್ತಿದೆ

.15 ವರ್ಷಗಳ ನಂತರ ಮತ್ತೆ ಒಂದಾದ ಜಗ್ಗಣ್ಣ ಮತ್ತು ಗುರುಪ್ರಸಾದ್ ಜೋಡಿ ಈ ಸಲ ಪ್ರೇಕ್ಷಕರಿಗೆ ಯಾವ‌ರೀತಿ ಮೋಡಿ ಮಾಡುತ್ತಾರೆಂದು ಕಾದು ನೋಡಬೇಕಿದೆ. ಈ ಕುರಿತು ನಡೆದ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದ ಚಿತ್ರತಂಡ ಮಾಹಿತಿ ಹಂಚಿಕೊಂಡಿತು.

ಜಗ್ಗೇಶ್ , ಚೈತ್ರ ಕೊಟ್ಟೂರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ..
ಕಾರ್ಯಕ್ರಮದಲ್ಲಿ ನಾಯಕನಟ ಜಗ್ಗೇಶ್ ಮಾತನಾಡುತ್ತ ಈ ಸಿನಿಮಾ ಸಂಪೂರ್ಣವಾಗಿ ಗುರುಪ್ರಸಾದ್ ಅವರ ಪ್ರಸಾದ. ಎನ್ನುತ್ತ ಮಠ ಹಾಗೂ ಎದ್ದೇಳು ಮಂಜುನಾಥ ಸಿನಿಮಾದ ನೆನಪುಗಳನ್ನ ಮೆಲುಕು ಹಾಕಿದರು. ಗುರುಪ್ರಸಾದ್ ಜಗಮೊಂಡ, ಆತ ಯಾರು ಮಾತನ್ನೂ ಕೇಳೋನಲ್ಲ. ಮದವೇರಿದ ಒಂಟಿ ಸಲಗನಂತೆ ಎಂದು ನಿರ್ದೇಶಕರ ಕಾರ್ಯವೈಖರಿಯನ್ನು ಮೆಚ್ಚುಕೊಂಡರು.
ವರ್ಷಕ್ಕೊಂದು ಸಿನಿಮಾ ಮಾಡಿದ್ರೆ ಕಂಡಿತಾ ಒಳ್ಳೆದಾಗತ್ತೆ ಎಂದು ಮಾತನಾಡಿದ ಜಗ್ಗೇಶ್,
ಡಬ್ಬಿಂಗ್ ಸ್ಟುಡಿಯೋ ನಂಗೆ ತುಂಬಾ ಇಷ್ಟವಾದ ಜಾಗ ಎಂದರು.
ಇಂಡಸ್ಟ್ರಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟ ನವರಸನಾಯಕ ಜಗ್ಗೇಶ್ ಫೈನ್ ಓನ್ ಅನ್ನೋ ಡಬ್ಬಿಂಗ್ ಸ್ಟುಡಿಯೋವನ್ನು ಶುರು ಮಾಡ್ತಿದ್ದಾರೆ..
ರಂಗನಾಯಕ. ಒಂದು ಎಂಟರ್ ಟೈನಿಂಗ್ ಚಿತ್ರ. ಜನ ಥಿಯೇಟರ್ ಗೆ ಬಂದು ಬಾಯಿ ತುಂಬಾ ನಕ್ಬಿಟ್ರೆ ನಮಗೆ ಖುಷಿಯಾಗತ್ತೆ ಎಂದು ಡೋಲೊ 650 ಡೈಲಾಗ್ ಹೇಳಿದರು.

Related posts

“ಬಿಂಗೊ” ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ .

Kannada Beatz

ಆರ್. ಚಂದ್ರು 45ನೇ ಹುಟ್ಟುಹಬ್ಬಕ್ಕೆ ಡಾಕ್ಟರೇಟ್ ಗೌರವ

Kannada Beatz

ಫೆಬ್ರವರಿ 10 ಕ್ಕೆ ಪೃಥ್ವಿ ಅಂಬರ್ – ಮಿಲನ ನಾಗರಾಜ್ ಅಭಿನಯದ “F0R REGN” ಚಿತ್ರ ಬಿಡುಗಡೆ.

Kannada Beatz

Leave a Comment

Share via
Copy link
Powered by Social Snap