Kannada Beatz
News

ಆಗಸ್ಟ್ 29ಕ್ಕೆ ರಿಪ್ಪನ್ ಸ್ವಾಮಿ ತೆರೆಗೆ : ಅತಿ ಶೀಘ್ರದಲ್ಲಿಯೇ ಬರಲಿದೆ ಟೀಸರ್, ಟ್ರೇಲರ್..!

ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅವರು ಇತ್ತೀಚೆಗೆ ಒಪ್ಪಿಕೊಳ್ಳುತ್ತಿರುವ ಸಿನಿಮಾಗಳು ಬಹಳ ವಿಭಿನ್ನವಾಗಿವೆ. ಒಂದೊಂದು ಪಾತ್ರಗಳು ಕೂಡ ಬೇರೆಯದ್ದೇ ರೀತಿ ಇರುತ್ತವೆ. ಅಂತಹ ಸಿನಿಮಾಗಳನ್ನೇ ವಿಜಯ್ ರಾಘವೇಂದ್ರ ಅವರು ಒಪ್ಪಿಕೊಂಡು ಮಾಡ್ತಾ ಇದ್ದಾರೆ.

ಆ ಸಾಲಿಗೆ ಸೇರಿರುವುದು ರಿಪ್ಪನ್ ಸ್ವಾಮಿ ಸಿನಿಮಾ. ಈ ಮೊದಲು ಮಾಲ್ಗುಡಿ ಡೇಸ್ ಸಿನಿಮಾ ನಿರ್ದೇಶನ ಮಾಡಿದ್ದ ಯುವ ನಿರ್ದೇಶಕ ಕಿಶೋರ್ ಮೂಡಬಿದ್ರೆ ರಿಪ್ಪನ್ ಸ್ವಾಮಿ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾದ ಟೀಸರ್ ಮತ್ತು ಟ್ರೇಲರ್ ಶೀಘ್ರದಲ್ಲಿಯೇ ರಿಲೀಸ್ ಆಗುತ್ತೆ. ಸಿನಿಮಾ ಆಗಸ್ಟ್ 29ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಉಳಿದಂತೆ ಸಿನಿಮಾದಲ್ಲಿ ಸಾಂಗ್ ಕೂಡ ಹೈಲೇಟ್ ಆಗಿದ್ದು, 2 ಹಾಡುಗಳು ಇದಾವೆ.

ವಿಜಯ್ ರಾಘವೇಂದ್ರ ಸಿನಿ ಜೀವನದಲ್ಲಿಯೇ ಇದು ಬೆಸ್ಟ್ ಸಿನಿಮಾ ಅಂದ್ರೆ ತಪ್ಪಾಗುವುದಿಲ್ಲ. ಯಾಕಂದ್ರೆ ಕಥೆ, ಪಾತ್ರ ಅಷ್ಟು ಗಟ್ಟಿಯಾಗಿದೆ. ಶ್ರಮವೂ ಅಷ್ಟೇ ಜಾಸ್ತಿ ಇದೆ. ಈಗಾಗಲೇ ಪೋಸ್ಟರ್ ಗಳಿಂದಾನೇ ಎಲ್ಲರ ಗಮನ ಸೆಳೆದಿದೆ. ಚಿನ್ನಾರಿ‌ ಮುತ್ತನನ್ನ ರಿಪ್ಪನ್ ಸ್ವಾಮಿಯಲ್ಲಿ ನೋಡಿ ಫ್ಯಾನ್ಸ್ ಕೂಡ ಕಾಯ್ತಾ ಇದ್ದಾರೆ. ಆ ಕಾಯುವಿಜೆಗೆ ಇನ್ನು ಸ್ವಲ್ಪ ದಿನವಷ್ಟೇ. ಆಗಸ್ಟ್ 29ಕ್ಕೆ ರಿಪ್ಪನ್ ಸ್ವಾಮಿ‌ ರಿಲೀಸ್ ಆಗ್ತಾ ಇದೆ.

ಈ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಅವರು ರಾ ಲುಕ್ ನಲ್ಲಿ ಕಾಣಿಸಕೊಂಡಿದ್ದಾರೆ. ವಿಜಯ್ ರಾಘವೇಂದ್ರ ಜೋಡಿಯಾಗಿ ಶಿವಮೊಗ್ಗ ಮೂಲದ ಕನ್ನಡ, ತಮಿಳು, ತೆಲುಗು ಸಿನಿಮಾದಲ್ಲಿ ನಟಿಸಿರುವ ಅಶ್ವಿನಿ ಚಂದ್ರಶೇಖರ್ ನಟಿಸಿದ್ದಾರೆ. ಉಳಿದಂತೆ ಪ್ರಕಾಶ್ ತುಮ್ಮಿ ನಾಡು , ವಜ್ರದೀರ್ ಜೈನ್, ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್, ಪ್ರಭಾಕರ್ ಕುಂದಾರ್, ರಂಜನ್ ಶೆಟ್ಟಿ, ಸಂತೋಷ್ ಶೆಟ್ಟಿ ಮುಂತಾದವರು ಇದ್ದಾರೆ.

ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಕೈಜೋಡಿಸಿ ನಿರ್ಮಾಣ ಮಾಡಿದ್ದಾರೆ. ಪಂಚಾನನ ಫಿಲಂಸ್ ನ ಮೊದಲನೇ ಸಿನಿಮಾ ಇದಾಗಿದೆ. ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತವನ್ನು ನೀಡಿದ್ದಾರೆ. ರಂಗನಾಥ್ ಸಿ ಎಂ ರವರು ಕ್ಯಾಮರಾ ಹಿಡಿದಿದ್ದಾರೆ. ಶಶಾಂಕ್ ನಾರಯಣ್ ಸಂಕಲನ ಮಾಡಿದ್ದಾರೆ. ಆಗಸ್ಟ್ 29ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.

Related posts

ವಸಿಷ್ಠ ಸಿಂಹ ‘ಲವ್ ಲಿ’ ಗೆ ಜೋಡಿಯಾದ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್

Kannada Beatz

“ನಿಲ್ಲಬೇಡ” ಹಾಡಿನ ಮೂಲಕ ಬಂದರು ಉತ್ತರ ಕರ್ನಾಟಕದ ಪ್ರತಿಭೆ ಸುನಿಧಿ ನೀಲೊಪಂತ್ .

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

Leave a Comment

Share via
Copy link
Powered by Social Snap