Kannada Beatz
News

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ.

ಬೆಂಗಳೂರು, ಮಾರ್ಚ್ 13, 2026 :
ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಹಾಗೂ ಸಮುದಾಯ ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಅಗತ್ಯವನ್ನು ಗುರುತಿಸಿ, ತಂತ್ರಜ್ಞಾನ ಸಂಸ್ಥೆ ಟೆಕಿಯಾನ್ ಮತ್ತು ಸರ್ಕಾರೇತರ ಸಂಸ್ಥೆಯಾದ ‘ಮೈಂಡ್ ಅಂಡ್ ಮ್ಯಾಟರ್ ಜೊತೆಗೆ ಸಹಭಾಗಿತ್ವ ಮಾಡಿಕೊಂಡಿದ್ದು, ಈ ವರ್ಷ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಉದ್ದೇಶ ಹೊಂದಿದೆ.

“ತನ್ನದೇ ಆದ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ ‘ಟೆಕಿಯಾನ್ ಫಾರ್ ಗುಡ್’ ಅಡಿಯಲ್ಲಿ ಈ ಸಹಭಾಗಿತ್ವವು ಮಾನಸಿಕ ಆರೋಗ್ಯದ ಬಗ್ಗೆ ಇರುವ ಕಳಂಕವನ್ನು ದೂರ ಮಾಡುವ ಉದ್ದೇಶದೊಂದಿಗೆ, ನಗರ ಹಾಗೂ ಗ್ರಾಮೀಣ ಪ್ರದೇಶಗಳ ಹಿಂದುಳಿದ ಸಮುದಾಯಗಳಿಗೆ ಉನ್ನತ ಗುಣಮಟ್ಟದ ಮಾನಸಿಕ ಆರೋಗ್ಯ ಸಂಪನ್ಮೂಲಗಳನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡಲಿದೆ. “ಮಾನಸಿಕ ಆರೋಗ್ಯವನ್ನು ನಮ್ಮ ಸಮಾಜದ ಅವಿಭಾಜ್ಯ ಭಾಗವಾಗಿ ಸಾಮಾನ್ಯವಾಗಿ ಸ್ವೀಕರಿಸುವುದು ಅಗತ್ಯ,” ಎಂದು ಮೈಂಡ್ ಅಂಡ್ ಮ್ಯಾಟರ್ ಸಂಸ್ಥಾಪಕಿ ದೀಪಿಕಾ ಅಪ್ಪಯ್ಯ ಹೇಳಿದರು.

ಈ ಕಾರ್ಯಕ್ರಮವು ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿರುವ ಮಕ್ಕಳು (9 ವರ್ಷ ಮೇಲ್ಪಟ್ಟ), ಹದಿಹರೆಯದವರು, ಪೋಷಕರು ಮತ್ತು ಶಿಕ್ಷಕರ ಮೇಲೆ ಕೇಂದ್ರೀಕರಿಸುತ್ತದೆ. ಈ ಕಾರ್ಯಕ್ರಮದ ಪ್ರಮುಖ ವೈಶಿಷ್ಟ್ಯವೆಂದರೆ ಅದರ ಸ್ಥಳೀಯ ಭಾಷಾ ವಿಧಾನ, ಪ್ರಾದೇಶಿಕ ಭಾಷೆಗಳಲ್ಲಿ ಚಟುವಟಿಕೆ ಆಧಾರಿತ ಸತ್ರಗಳು ಮತ್ತು ಮಾನಸಿಕ ಆರೋಗ್ಯ ಸಾಧನಗಳನ್ನು ಒದಗಿಸುವ ಮೂಲಕ ಭಾಷಾ ಅಡೆತಡೆಯಿಂದ ಯಾರೂ ಹಿಂದೆ ಬಿದ್ದಂತಾಗದಂತೆ ನೋಡಿಕೊಳ್ಳುತ್ತದೆ. ಪಠ್ಯಕ್ರಮವು ಶಾಲೆಗಳಲ್ಲಿ ಸುರಕ್ಷಿತ ಸ್ಥಳಗಳು ಮತ್ತು ಸಹಾನುಭೂತಿಯ ಬೆಂಬಲ ವ್ಯವಸ್ಥೆಗಳನ್ನು ಬೆಳೆಸಲು ತರಬೇತಿ ಪಡೆದ ಸ್ವಯಂಸೇವಕರು ನಿಮ್ಹಾನ್ಸ್ ಅಭಿವೃದ್ಧಿಪಡಿಸಿದ ವಿಶೇಷ ಮಾದರಿಗಳನ್ನು ಬಳಸಿಕೊಳ್ಳುತ್ತದೆ.

“ಮಾನಸಿಕ ಆರೋಗ್ಯವನ್ನು ಸಾಮಾನ್ಯವಾಗಿ ನಗರ ಮತ್ತು ಉನ್ನತ ವರ್ಗದ ದೃಷ್ಟಿಕೋನದಿಂದ ನೋಡಲಾಗುತ್ತದೆ, ಆದರೆ ಸಹನಶೀಲತೆ ಎಲ್ಲರಿಗೂ ಅಗತ್ಯವಾಗಿದೆ,” ಎಂದು ಟೆಕಿಯಾನ್‌ ನ ಚೆನ್ನೈ ಎಂಜಿನಿಯರಿಂಗ್ ಕೇಂದ್ರದ ಮುಖ್ಯಸ್ಥ ಸಂತೋಷ್ ಗೋಲೆಚಾ ಹೇಳಿದರು. “ಈ ಕಾರ್ಯಕ್ರಮ ಕೇವಲ ಜಾಗೃತಿಗಾಗಿ ಅಲ್ಲ, ಮುಂದಿನ ಪೀಳಿಗೆಗೆ ಆರೋಗ್ಯಕರ ಮತ್ತು ಉತ್ತಮ ಭವಿಷ್ಯ ನಿರ್ಮಿಸಲು ಅಗತ್ಯ ಸಾಧನಗಳನ್ನು ನೀಡುವುದರ ಬಗ್ಗೆಇರಲಿದೆ” ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮವು ದೀರ್ಘಕಾಲಿಕ ಮಾನಸಿಕ ಆರೋಗ್ಯ ಜಾಗೃತಿ ಮತ್ತು ಬೆಂಬಲವನ್ನು ಮುಂದುವರಿಸಲು ಸ್ವಯಂಸೇವಕರ ವ್ಯವಸ್ಥೆಯ ಕಡೆಗೂ ಗಮನ ಹರಿಸುತ್ತದೆ. ಭಾವನೆಗಳು, ಸಹಾನುಭೂತಿ, ಸಂವಹನ ಮತ್ತು ಒಟ್ಟಾರೆ ಬೆಳವಣಿಗೆ ಬಗ್ಗೆ ನಡೆಯುವ ಸಂಭಾಷಣೆಗಳನ್ನು ಯುವಜನರು ಮತ್ತು ಶಿಕ್ಷಕರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡಲು ಈ ಚಟುವಟಿಕೆ ಆಧಾರಿತ ಅವಧಿಗಳನ್ನು ವಿನ್ಯಾಸಗೊಳಿಸಲಾಗಿದೆ.

ಶಾಲೆಯಲ್ಲಿ ಮಾತ್ರವಲ್ಲದೇ, ಟೆಕಿಯಾನ್‌ ಸಂಸ್ಥೆ ‘ಮಾನಸಿಕ ಆರೋಗ್ಯಕ್ಕಾಗಿ ಭಾನುವಾರ’ ಕಾರ್ಯಕ್ರಮವನ್ನು ವಿವಿಧ ನಗರಗಳಲ್ಲಿ ಆಯೋಜಿಸುತ್ತಿರುವ ಮೈಂಡ್ ಅಂಡ್ ಮ್ಯಾಟರ್ ಸಂಸ್ಥೆಗೆ ಸಹಾಯ ಮಾಡುತ್ತಿದೆ. ಈ ಸಮುದಾಯ ಕ್ರಮವು ತನ್ನ ವ್ಯಾಪ್ತಿಯನ್ನು ಚೆನ್ನೈ, ಪುದುಚೇರಿ ಮತ್ತು ಬೆಂಗಳೂರು ನಗರಗಳಿಗೆ ವಿಸ್ತರಿಸಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ವಯೋಮಾನದವರಿಗಾಗಿ ಸಹನಶೀಲತೆ ಅಭಿವೃದ್ಧಿಪಡಿಸುವ ಕಾರ್ಯಾಗಾರಗಳನ್ನು ಆಯೋಜಿಸುತ್ತಿದೆ.

ಕಳೆದ ಐದು ವರ್ಷಗಳಲ್ಲಿ, ಮೈಂಡ್ ಅಂಡ್ ಮ್ಯಾಟರ್ ಸಂಸ್ಥೆ ಮಾನಸಿಕ ಆರೋಗ್ಯ ಜಾಗೃತಿ ಮತ್ತು ತಡೆಗಟ್ಟುವ ಮಾನಸಿಕ ಆರೋಗ್ಯ ಮಾದರಿಗಳ ಅನುಷ್ಠಾನದ ಮೂಲಕ 27,000 ಕ್ಕೂ ಹೆಚ್ಚು ಜನರ ಜೀವನಕ್ಕೆ ಪ್ರಭಾವ ಬೀರಿದೆ. ಇತ್ತೀಚಿನ ಅವರ “ಮಾನಸಿಕ ಆರೋಗ್ಯಕ್ಕಾಗಿ ಸಂಗೀತ” ಕಾರ್ಯಕ್ರಮವು ಆರೋಗ್ಯ ಮತ್ತು ಬದುಕಿನ ಬಗ್ಗೆ ಹೊಸತನ ಮತ್ತು ವಿಶ್ವವ್ಯಾಪಿ ದೃಷ್ಟಿಕೋನ ಹೊಂದಿರುವುದರಿಂದ ದೇಶವ್ಯಾಪಿ ಗುರುತು ಗಳಿಸಿದೆ.

ಹೆಚ್ಚಿನ ಮಾಹಿತಿಗಾಗಿ: +917019834421, ದೀಪಿಕಾ ಅಪ್ಪಯ್ಯ, ಮೈಂಡ್ ಅಂಡ್ ಮ್ಯಾಟರ್ ಸಂಸ್ಥೆ.

Related posts

ಜೂನ್ 3ಕ್ಕೆ ತೆರೆಮೇಲೆ ಸಂದೀಪ್ ಉನ್ನಿಕೃಷ್ಣನ್ ಜೀವನಚರಿತ್ರೆ ಮೇಜರ್ ರಿಲೀಸ್… ಬೆಂಗಳೂರಿನಲ್ಲಿ ಸಂದೀಪ್ ಅಭಿಮಾನಿಗಳಿಗಾಗಿ ಫ್ರೀ ಶೋ ಆಯೋಜಿಸಿದ್ದ ಚಿತ್ರತಂಡ

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

ಬೆಂಗಳೂರು, ಸಿದ್ಧರಾಗಿ! ಅನ್ವೇಷಿಸಲು ಇದು ಸಮಯ!

Kannada Beatz

Leave a Comment

Share via
Copy link
Powered by Social Snap