Kannada Beatz
News

ಆಂಜನೇಯನ ಸನ್ನಿಧಿಯಲ್ಲಿ ಶುರುವಾಯಿತು “ವರ್ಣಂ” .

ಇದು ಹೊಸತಂಡದ ಹೊಸ ಪ್ರಯತ್ನ.

ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗು ನೋಡುತ್ತಿರುವ ಈ ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ..

ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ “ವರ್ಣಂ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ಏಂಜಲ್ ಫಿಲಂಸ್ ಲಾಂಛನದಲ್ಲಿ ಆರ್ ಜಗದೀಶ್ ಬಾಬು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಅರುಣ್ ರಾಜ ನಿರ್ದೇಶಿಸುತ್ತಿದ್ದಾರೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಕಥೆ ಚೈತ್ರಾ ಅನಂತಾಡಿ ಅವರದು. ಚಿತ್ರಕಥೆಯನ್ನು ಮಂಜುನಥ್ ಕೋಟೆಕೆರೆ ಬರೆದಿದ್ದಾರೆ.
ಪ್ರದೀಪ್ ವಿ ಬಂಗಾರಪೇಟೆ ಛಾಯಾಗ್ರಹಣ, ಕೀರ್ತಿರಾಜ್ ಹಿನ್ನೆಲೆ ಸಂಗೀತ ಹಾಗೂ ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ‌. ಪವನ್ ಎನ್ ಈ ಚಿತ್ರದ ಸಹ ನಿರ್ಮಾಪಕರು.

ಮನು ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಮೇಘನ “ವರ್ಣಂ” ಚಿತ್ರದ ನಾಯಕಿ. ಎಂ.ಕೆ.ಮಠ, ರಿತಿಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಎರಡು ಮೈನವಿರೇಳಿಸುವ ಸಾಹಸ ಸನ್ನಿವೇಶಗಳು ಹಾಗೂ ಎರಡು ಇಂಪಾದ ಹಾಡುಗಳು “ವರ್ಣಂ” ಚಿತ್ರದಲ್ಲಿದೆ. ಡಿಸೆಂಬರ್ 8 ರಿಂದ ತುಮಕೂರು, ಹೊನ್ನಾವರ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Related posts

ಟ್ರೇಲರ್ ಬಿಡುಗಡೆ ಮಾಡಿ‌ “ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್.. .

Kannada Beatz

ಟಿವಿ9 ಎಜುಕೇಶನ್ ಎಕ್ಸ್‌ಪೋ 2026
ಕೆ.ಎಲ್. ಡೀಮ್ಡ್ ಟು ಬಿ ಯೂನಿವರ್ಸಿಟಿ ಪ್ರಸ್ತುತಪಡಿಸುತ್ತಿದೆ – ಟಿವಿ9 ಎಜುಕೇಶನ್ ಎಕ್ಸ್‌ಪೋ 2026.

Kannada Beatz

ನಾವೆಲ್ಲಾ ಡಮ್ಮಿ. ವಿಂಗ್ ಕಮಾಂಡರ್ ಅಭಿನಂದನ್ ನಿಜವಾದ ಹೀರೋ – ದರ್ಶನ್..!

administrator

Leave a Comment

Share via
Copy link
Powered by Social Snap