Kannada Beatz
News

ಸುಮಧುರವಾಗಿದೆ “ಕೌಟಿಲ್ಯ” ನ ಹಾಡುಗಳು.

ಸುಪ್ರಸಿದ್ಧ “ಶನಿ” ಧಾರಾವಾಹಿಯಲ್ಲಿ ಶಿವನ ಪಾತ್ರದ ಮೂಲಕ ಗಮನ ಸೆಳೆದಿದ್ದ, “ಜಂಟಲ್ ಮ್ಯಾನ್” ಚಿತ್ರದಲ್ಲಿ ಖಳನಾಯಕನಾಗಿ ಮನೆಮಾತಾಗಿರುವ ಅರ್ಜುನ್ ರಮೇಶ್ ಹಾಗೂ “ಮನಸಾರೆ” ಧಾರಾವಾಹಿ ಖ್ಯಾತಿಯ ಪ್ರಿಯಾಂಕ ಚಿಂಚೋಳಿ ನಾಯಕ- ನಾಯಕಿಯಾಗಿ ನಟಿಸಿರುವ “ಕೌಟಿಲ್ಯ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, “ಮುಂಗಾರು ಮಳೆ” ಚಿತ್ರದ ನಿರ್ಮಾಪಕ ಇ. ಕೃಷ್ಣಪ್ಪ, ಭಾ.ಮ.ಹರೀಶ್ ಹಾಗೂ “ಪ್ರೇಮಪೂಜ್ಯಂ” ಚಿತ್ರದ ಬೃಂದಾ ಆಚಾರ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ಪ್ರಭಾಕರ್ ಶೇರ್ ಖಾನೆ ಈ ಚಿತ್ರ ನಿರ್ದೇಶನ ಮಾಡಿದ್ದು, ವಿಜೇಂದ್ರ.ಬಿ.ಎ ನಿರ್ಮಾಣ ಮಾಡಿದ್ದಾರೆ.

ನಾನು ಮೊದಲು ದುನಿಯಾ ಸೂರಿ ಅವರ ಜೊತೆ ಕೆಲಸ ಮಾಡಿದ್ದೆ. ಇದು ಮೊದಲ ನಿರ್ದೇಶನದ ಚಿತ್ರ. ತುಂಬಾ ಇಷ್ಟಪಟ್ಟು, ಕಷ್ಟ ಪಟ್ಟು ಸಿನಿಮಾ ಮಾಡಿದ್ದೀವಿ. ಮೊದಲು ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಚಿತ್ರದ ನಾಯಕ ಅರ್ಜುನ್ ರಮೇಶ್ ಎಲ್ಲಾ ಕೆಲಸದಲ್ಲೂ ನನ್ನ ನೆರವಿಗೆ ನಿಂತರು.
“ಕೌಟಿಲ್ಯ” ಅಂದರೆ ಅರ್ಥಶಾಸ್ತ್ರದ ಪಿತಾಮಹ. ಒಬ್ಬ ಚಂದು ಎಂಬ ಹುಡುಗನನ್ನು ಚಂದ್ರಗುಪ್ತ ಮೌರ್ಯನನ್ನಾಗಿ ಮಾಡಿದ್ದಾತ. ನಮ್ಮ ಚಿತ್ರದ ಕಥೆಯು ಇದೇ ದಿಕ್ಕಿನಲ್ಲಿ ಸಾಗುವುದರಿಂದ “ಕೌಟಿಲ್ಯ” ಎಂದು ಹೆಸರಿಡಲಾಗಿದೆ ಎಂದರು ನಿರ್ದೇಶಕ ಪ್ರಭಾಕರ್ ಶೇರ್ ಖಾನೆ.

ನನ್ನ ಜೀವನದಲ್ಲಿ “ಶನಿ” ಹಾಗೂ “ಮಹಾಕಾಳಿ” ಧಾರಾವಾಹಿಗಳನ್ನು ಎಂದು ಮರೆಯಲು ಸಾಧ್ಯವಿಲ್ಲ. ಆ ಧಾರಾವಾಹಿಯ ಜನಪ್ರಿಯತೆಯಿಂದ ನಾನು ಪುರಸಭಾ ಸದಸ್ಯ ಕೂಡ ಆದೆ. ಚಿತ್ರದ ನಿರ್ದೇಶಕರು ಬಂದು ಕಥೆ ಹೇಳಿದಾಗ ನಾನು ಒಂದು ಮಾತು ಹೇಳಿದ್ದೆ. ನೀವು ಅಂದುಕೊಂಡ ಹಾಗೆ ಸಿನಿಮಾ ಮಾಡಿದರೆ, ಈ ಚಿತ್ರ ಒಂದು ಒಳ್ಳೆಯ ಸಿನಿಮಾ ಆಗುವುದರಲ್ಲಿ ಸಂದೇಹವಿಲ್ಲ ಎಂದು. ನಾನು ಈ ಚಿತ್ರದಲ್ಲಿ ಆರ್ಕಿಟೆಕ್ ಎಂಜಿನಿಯರ್ ಪಾತ್ರ ಮಾಡಿದ್ದೀನಿ ಎಂದರು ನಾಯಕ ಅರ್ಜುನ್ ರಮೇಶ್.

ನಾನು ಈವರೆಗೂ ಅಭಿನಯಿಸಿದ್ದ ಎಲ್ಲಾ ಪಾತ್ರಗಳು ಸೌಮ್ಯ ಸ್ವಭಾವದ ಹುಡುಗಿಯದಾಗಿರುತ್ತಿತ್ತು. ಮೊದಲ ಬಾರಿಗೆ ಸ್ವಲ್ಪ ಘಾಟಿ ಹುಡುಗಿ ಪಾತ್ರ ಮಾಡಿದ್ದೇನೆ ಎಂದರು ನಾಯಕಿ ಪ್ರಿಯಾಂಕ ಚಿಂಚೋಳಿ.

ನಾನು ಮೂಲತಃ ಸೇಲ್ಸ್ ರೆಪ್ರೆಸೆಂಟೇಟಿವ್. ಸಿನಿಮಾ ನಿರ್ಮಾಣ ನನ್ನ ಕನಸು. ಅಂದುಕೊಂಡದಕ್ಕಿಂತ ಸ್ವಲ್ಪ ಜಾಸ್ತಿ ಬಜೆಟ್ ನಲ್ಲಿ ಸಿನಿಮಾ ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ನಾನು ಹನುಮಂತನ ಭಕ್ತ ಮುಂದೊಂದು ದಿನ ಹನುಮ ಚರಿತೆ ಸಿನಿಮಾ ಮಾಡುವ ಆಸೆಯಿದೆ ಎಂದರು ನಿರ್ಮಾಪಕ ವಿಜೇಂದ್ರ.

ಹಾಡುಗಳ ಹಾಗೂ ಹಾಡಿರುವವರ ಬಗ್ಗೆ ಸಂಗೀತ ನಿರ್ದೇಶಕ ಕಿರಣ್ ಕೃಷ್ಣಮೂರ್ತಿ ಮಾಹಿತಿ ನೀಡಿದರು. ಅನೇಕ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಮಾತನಾಡಿದರು.

Related posts

ಕಣ್ಮನ ಸೆಳೆಯುತ್ತಿದೆ “ಕಡಲೂರ ಕಣ್ಮಣಿ” ಚಿತ್ರದ ಟೀಸರ್ ಹಾಗೂ ಹಾಡುಗಳು.

Kannada Beatz

“ಬಿಂಗೊ” ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ .

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

Leave a Comment

Share via
Copy link
Powered by Social Snap