ಚಂದನವನದ ಲವಲವಿಕೆ ಹೀರೋ ಅನೀಶ್ ತೇಜ್ವರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅನೀಶ್ ಜನುಮದಿನದ ಪ್ರಯುಕ್ತ ಅವರು ನಟಿಸಿ, ನಿರ್ಮಾಣ ಮಾಡಿರುವ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದೆ.
ಅನೀಶ್ ಹತ್ತನೇ ಸಿನಿಮಾ ‘ಬೆಂಕಿ’

ನಮ್ ಏರಿಯಾಲಿ ಒಂದಿನ, ಪೊಲೀಸ್ ಕ್ವಾಟ್ರಸ್, ಅಕಿರ, ವಾಸು ನನ್ ಪಕ್ಕ ಕಮರ್ಷಿಯಲ್, ರಾಮಾರ್ಜುನ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ ಮೂಲಕ ಗಮನಸೆಳೆದಿರುವ ಅನೀಶ್ ಈಗ, ಬೆಂಕಿ ಸಿನಿಮಾ ಮೂಲಕ ಪ್ರತ್ಯಕ್ಷರಾಗಿದೆ. ಗಡ್ಡ ಮೀಸೆ ಬಿಟ್ಟು ಖಡಕ್ ಲುಕ್ ನಲ್ಲಿ ಅನೀಶ್ ಮಿಂಚಿದ್ದಾರೆ. ಬೆಂಕಿ ಎಂಬ ಕ್ಯಾಚಿ ಟೈಟಲ್ ಇಟ್ಟು.. ಬೆಂಕಿಯಂತಹ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಆರ್. ಬಾಬು ಅವರ ಪುತ್ರ, ಶಾನ್ ಎಂಬವರು ಬೆಂಕಿ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ. ಈಗಾಗಲೇ ಸಿನಿಮಾದ ಶೇ. 80ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದ್ದು, ಹಾಡು ಮತ್ತು ಒಂದಷ್ಟು ಟಾಕಿ ಭಾಗದ ಶೂಟಿಂಗ್ ಮಾತ್ರ ಬಾಕಿ ಇದೆ.

ಅನೀಶ್ ಗೆ ಜೋಡಿಯಾಗಿ ರೈಡರ್ ಸಿನಿಮಾ ಖ್ಯಾತಿಯ ಸಂಪದ ನಟಿಸಿದ್ದು, ಶೃತಿ ಪಾಟೀಲ್, ಅಚ್ಯುತ್ ಕುಮಾರ್, ಸಂಪತ್, ಉಗ್ರಂ ಮಂಜು, ಹರಿಣಿ ಸೇರಿದಂತೆ ಅನುಭವಿ ಕಲಾ ಬಳಗ ಸಿನಿಮಾದಲ್ಲಿದ್ದೂ, ಕೌಶಿಕ್ ಹರ್ಷ ಸಂಗೀತ ಸಂಯೋಜನೆ, ವೀನಸ್ ನಾಗರಾಜ್ ಮೂರ್ತಿ ಕ್ಯಾಮೆರಾ ವರ್ಕ್ ಸಿನಿಮಾದಲ್ಲಿದೆ.
ಅಣ್ಣ ತಂಗಿ ಸೆಂಟಿಮೆಂಟ್ ಕಥೆ ಜೊತೆಗೆ ಹಳ್ಳಿ ಸೊಡಗಿನ ಕಂಪು ಚೆಲ್ಲುವ ಬೆಂಕಿ ಸಿನಿಮಾದ ಫಸ್ಟ್ ಲುಕ್ ಮಾಸ್ ಲುಕ್ ನಲ್ಲಿ ಮೂಡಿ ಬಂದಿದ್ದು, ಅನೀಶ್ ಸಿನಿಮಾ ಬದುಕಿನ ಹತ್ತನೇ ಸಿನಿಮಾವಾಗಿರುವ ಬೆಂಕಿ ಚಿತ್ರಕ್ಕೆ ಅನೀಶ್ ತಮ್ಮದೇ ವಿಂಕ್ ವಿಷಲ್ ಪ್ರೊಡಕ್ಷನ್ ನಡಿ ಬಂಡವಾಳ ಹೂಡಿದ್ದಾರೆ.

- ರವಿಚಂದ್ರನ್-ಹಂಸಲೇಖರ 40 ವರ್ಷಗಳ ಸಂಗೀತ ಪಯಣದ ಸಂಭ್ರಮ
- “ಗಾಡ್ ಪ್ರಾಮಿಸ್’ಗೆ ಸಿಕ್ಕರು ನಾಯಕಿ…ಸೂಚನ್ ಶೆಟ್ಟಿಗೆ ಜೂಹಿ ಜಯಕುಮಾರ್ ನಾಯಕಿ
- ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ.
- ವಸಿಷ್ಠ ಸಿಂಹ ಅಭಿನಯದ ‘ಕಡಲ್ ಕೋಟೆ’ ಚಿತ್ರ ಪ್ರಾರಂಭ
- ದೇವಸಸ್ಯ ಚಿತ್ರೀಕರಣ ಮುಕ್ತಾಯ
ಚಿತ್ರದಲ್ಲಿ ಸಿದ್ದಿ ಸಂಸ್ಕೃತಿಯ ಅನಾವರಣ - ವಕೀಲರ ವೃತ್ತಿ ಬದುಕಿಗೆ ಗೌರವ ಸಲ್ಲಿಸುವ “ನ್ಯಾಯ-ಅನ್ಯಾಯ” ಸಂಗೀತ ಆಲ್ಬಮ್ ಬಿಡುಗಡೆ
- ಚಿತ್ರೋದ್ಯಮಕ್ಕೆ ಹೊಸ ಕಳೆ ತಂದ ಹೇಮಂತ್ ಹವಾ!
- ಈ ವರ್ಷದ ಎಕ್ಸ್ ಪೆಕ್ಟೆಡ್ ತುಳು ನಾಡಿನಲ್ಲಿ ಚಿತ್ರಿಸಿದ ‘ರಾಜನಿವಾಸ’ ಚಿತ್ರ ಬಿಡುಗಡೆಗೆ ಸಿದ್ದ
- 20ವರುಷಗಳ ಗೋಲ್ಡನ್ ಸ್ಟಾರ್ ಸಂಭ್ರಮದಲ್ಲಿ ಆರಂಭವಾಯಿತು ಗಣೇಶ್ ನೂತನ ಸಿನಿಮಾ “ತಮ್ಮ ಸುಖಗಮನ ಬಯಸುವ “
- ಯುಗಳಗೀತೆಯ ಚಿತ್ರೀಕರಣದೊಂದಿಗೆ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಪೂರ್ಣ * .
