ಚಂದನವನದ ಲವಲವಿಕೆ ಹೀರೋ ಅನೀಶ್ ತೇಜ್ವರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅನೀಶ್ ಜನುಮದಿನದ ಪ್ರಯುಕ್ತ ಅವರು ನಟಿಸಿ, ನಿರ್ಮಾಣ ಮಾಡಿರುವ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದೆ.
ಅನೀಶ್ ಹತ್ತನೇ ಸಿನಿಮಾ ‘ಬೆಂಕಿ’

ನಮ್ ಏರಿಯಾಲಿ ಒಂದಿನ, ಪೊಲೀಸ್ ಕ್ವಾಟ್ರಸ್, ಅಕಿರ, ವಾಸು ನನ್ ಪಕ್ಕ ಕಮರ್ಷಿಯಲ್, ರಾಮಾರ್ಜುನ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ ಮೂಲಕ ಗಮನಸೆಳೆದಿರುವ ಅನೀಶ್ ಈಗ, ಬೆಂಕಿ ಸಿನಿಮಾ ಮೂಲಕ ಪ್ರತ್ಯಕ್ಷರಾಗಿದೆ. ಗಡ್ಡ ಮೀಸೆ ಬಿಟ್ಟು ಖಡಕ್ ಲುಕ್ ನಲ್ಲಿ ಅನೀಶ್ ಮಿಂಚಿದ್ದಾರೆ. ಬೆಂಕಿ ಎಂಬ ಕ್ಯಾಚಿ ಟೈಟಲ್ ಇಟ್ಟು.. ಬೆಂಕಿಯಂತಹ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಆರ್. ಬಾಬು ಅವರ ಪುತ್ರ, ಶಾನ್ ಎಂಬವರು ಬೆಂಕಿ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ. ಈಗಾಗಲೇ ಸಿನಿಮಾದ ಶೇ. 80ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದ್ದು, ಹಾಡು ಮತ್ತು ಒಂದಷ್ಟು ಟಾಕಿ ಭಾಗದ ಶೂಟಿಂಗ್ ಮಾತ್ರ ಬಾಕಿ ಇದೆ.

ಅನೀಶ್ ಗೆ ಜೋಡಿಯಾಗಿ ರೈಡರ್ ಸಿನಿಮಾ ಖ್ಯಾತಿಯ ಸಂಪದ ನಟಿಸಿದ್ದು, ಶೃತಿ ಪಾಟೀಲ್, ಅಚ್ಯುತ್ ಕುಮಾರ್, ಸಂಪತ್, ಉಗ್ರಂ ಮಂಜು, ಹರಿಣಿ ಸೇರಿದಂತೆ ಅನುಭವಿ ಕಲಾ ಬಳಗ ಸಿನಿಮಾದಲ್ಲಿದ್ದೂ, ಕೌಶಿಕ್ ಹರ್ಷ ಸಂಗೀತ ಸಂಯೋಜನೆ, ವೀನಸ್ ನಾಗರಾಜ್ ಮೂರ್ತಿ ಕ್ಯಾಮೆರಾ ವರ್ಕ್ ಸಿನಿಮಾದಲ್ಲಿದೆ.
ಅಣ್ಣ ತಂಗಿ ಸೆಂಟಿಮೆಂಟ್ ಕಥೆ ಜೊತೆಗೆ ಹಳ್ಳಿ ಸೊಡಗಿನ ಕಂಪು ಚೆಲ್ಲುವ ಬೆಂಕಿ ಸಿನಿಮಾದ ಫಸ್ಟ್ ಲುಕ್ ಮಾಸ್ ಲುಕ್ ನಲ್ಲಿ ಮೂಡಿ ಬಂದಿದ್ದು, ಅನೀಶ್ ಸಿನಿಮಾ ಬದುಕಿನ ಹತ್ತನೇ ಸಿನಿಮಾವಾಗಿರುವ ಬೆಂಕಿ ಚಿತ್ರಕ್ಕೆ ಅನೀಶ್ ತಮ್ಮದೇ ವಿಂಕ್ ವಿಷಲ್ ಪ್ರೊಡಕ್ಷನ್ ನಡಿ ಬಂಡವಾಳ ಹೂಡಿದ್ದಾರೆ.

- ನವೆಂಬರ್ 21ಕ್ಕೆ ಆಕ್ಷನ್ ಥ್ರಿಲ್ಲರ್ ಮಫ್ತಿ ಪೊಲೀಸ್ ರಿಲೀಸ್
- ಬಹಳ ದಿನಗಳ ನಂತರದಲ್ಲಿ ಕನ್ನಡದಲ್ಲಿ ಫೋಟೋಗ್ರಾಫರ್ ಜೀವನದ ಕುರಿತಾದ ಕತೆಯೊಂದು ಸಿನೆಮಾವಾಗಿ ತೆರೆಗೆ ಬರಲು ಸಿದ್ದವಾಗಿದೆ
- ಮಹಾಕಾಳಿಯಾದ ಭೂಮಿ ಶೆಟ್ಟಿ..ಲೇಡಿ ಸೂಪರ್ ಹೀರೋ ಕಥೆ ಹೇಳಲಿದ್ದಾರೆ ಪ್ರಶಾಂತ್ ವರ್ಮಾ
- ಮೆಜೆಸ್ಟಿಕ್-2 ಚಿತ್ರಕ್ಕೆU/A
ನವೆಂಬರ್ ಬಿಡುಗಡೆ - ನಿರ್ಮಾಪಕರಾದ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್
- ‘ದಿಲ್ಮಾರ್’ಗೆ ಪ್ರೀ-ರಿಲೀಸ್ ಇವೆಂಟ್ ಗೆ ಶಿವಣ್ಣ ಮೆರುಗು..ರಾಮ್-ಚಂದ್ರಮೌಳಿ ಚಿತ್ರಕ್ಕೆ ದೊಡ್ಮನೆ ದೊರೆ ಹಾರೈಕೆ
- (no title)
- ‘ಜೈ’ ಚಿತ್ರದ ಪ್ರೇಮಗೀತೆ ಬಿಡುಗಡೆ
- ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್
- ಟೀಸರ್ ನಲ್ಲೇ ಮೋಡಿ ಮಾಡಿದ “ಉಡಾಳ” .
