ಚಂದನವನದ ಲವಲವಿಕೆ ಹೀರೋ ಅನೀಶ್ ತೇಜ್ವರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅನೀಶ್ ಜನುಮದಿನದ ಪ್ರಯುಕ್ತ ಅವರು ನಟಿಸಿ, ನಿರ್ಮಾಣ ಮಾಡಿರುವ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದೆ.
ಅನೀಶ್ ಹತ್ತನೇ ಸಿನಿಮಾ ‘ಬೆಂಕಿ’

ನಮ್ ಏರಿಯಾಲಿ ಒಂದಿನ, ಪೊಲೀಸ್ ಕ್ವಾಟ್ರಸ್, ಅಕಿರ, ವಾಸು ನನ್ ಪಕ್ಕ ಕಮರ್ಷಿಯಲ್, ರಾಮಾರ್ಜುನ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ ಮೂಲಕ ಗಮನಸೆಳೆದಿರುವ ಅನೀಶ್ ಈಗ, ಬೆಂಕಿ ಸಿನಿಮಾ ಮೂಲಕ ಪ್ರತ್ಯಕ್ಷರಾಗಿದೆ. ಗಡ್ಡ ಮೀಸೆ ಬಿಟ್ಟು ಖಡಕ್ ಲುಕ್ ನಲ್ಲಿ ಅನೀಶ್ ಮಿಂಚಿದ್ದಾರೆ. ಬೆಂಕಿ ಎಂಬ ಕ್ಯಾಚಿ ಟೈಟಲ್ ಇಟ್ಟು.. ಬೆಂಕಿಯಂತಹ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಆರ್. ಬಾಬು ಅವರ ಪುತ್ರ, ಶಾನ್ ಎಂಬವರು ಬೆಂಕಿ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ. ಈಗಾಗಲೇ ಸಿನಿಮಾದ ಶೇ. 80ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದ್ದು, ಹಾಡು ಮತ್ತು ಒಂದಷ್ಟು ಟಾಕಿ ಭಾಗದ ಶೂಟಿಂಗ್ ಮಾತ್ರ ಬಾಕಿ ಇದೆ.

ಅನೀಶ್ ಗೆ ಜೋಡಿಯಾಗಿ ರೈಡರ್ ಸಿನಿಮಾ ಖ್ಯಾತಿಯ ಸಂಪದ ನಟಿಸಿದ್ದು, ಶೃತಿ ಪಾಟೀಲ್, ಅಚ್ಯುತ್ ಕುಮಾರ್, ಸಂಪತ್, ಉಗ್ರಂ ಮಂಜು, ಹರಿಣಿ ಸೇರಿದಂತೆ ಅನುಭವಿ ಕಲಾ ಬಳಗ ಸಿನಿಮಾದಲ್ಲಿದ್ದೂ, ಕೌಶಿಕ್ ಹರ್ಷ ಸಂಗೀತ ಸಂಯೋಜನೆ, ವೀನಸ್ ನಾಗರಾಜ್ ಮೂರ್ತಿ ಕ್ಯಾಮೆರಾ ವರ್ಕ್ ಸಿನಿಮಾದಲ್ಲಿದೆ.
ಅಣ್ಣ ತಂಗಿ ಸೆಂಟಿಮೆಂಟ್ ಕಥೆ ಜೊತೆಗೆ ಹಳ್ಳಿ ಸೊಡಗಿನ ಕಂಪು ಚೆಲ್ಲುವ ಬೆಂಕಿ ಸಿನಿಮಾದ ಫಸ್ಟ್ ಲುಕ್ ಮಾಸ್ ಲುಕ್ ನಲ್ಲಿ ಮೂಡಿ ಬಂದಿದ್ದು, ಅನೀಶ್ ಸಿನಿಮಾ ಬದುಕಿನ ಹತ್ತನೇ ಸಿನಿಮಾವಾಗಿರುವ ಬೆಂಕಿ ಚಿತ್ರಕ್ಕೆ ಅನೀಶ್ ತಮ್ಮದೇ ವಿಂಕ್ ವಿಷಲ್ ಪ್ರೊಡಕ್ಷನ್ ನಡಿ ಬಂಡವಾಳ ಹೂಡಿದ್ದಾರೆ.

- ರಿಷಿ ಅಭಿನಯದ ಮುಂದಿನ ಸಿನಿಮಾ ಮಂಗಳಾಪುರಂ
- Title option ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಬರ್ತಿದ್ದಾರೆ ನಟ ರಿಷಿ
- ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಕೈಜೋಡಿಸಿದ ಬ್ಲಿಂಕ್ ಮತ್ತು ಶಾಖಹಾರಿ ಪ್ರೊಡ್ಯೂಸರ್ಸ್
- ‘ಗ್ಲೋಬಲ್’ ಲೆವೆಲ್ನಲ್ಲಿ ಕನ್ನಡಿಗ ಮಹಾಬಲ ರಾಮ್ ಹವಾ..ಪಾಕಿಸ್ತಾನ ಪ್ರವಾಸದ ಮಾಡಿದ ಮೊದಲ ಯೂಟ್ಯೂಬರ್!
- ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ “ಬ್ರ್ಯಾಟ್”.(BRAT) .
- ನರೇಂದ್ರ ಮೋದಿ ವಾಟ್ ಇಂಡಿಯಾ ಥಿಂಕ್ಸ್ ಟುಡೇ tv9 ನೆಟ್ವರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿದರು
- ಟ್ರೇಲರ್ ಬಿಡುಗಡೆ ಮಾಡಿ “ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್.. .
- ಬೆಂಗಳೂರು, ಸಿದ್ಧರಾಗಿ! ಅನ್ವೇಷಿಸಲು ಇದು ಸಮಯ!
- ಬೆಂಗಳೂರು, ಸಿದ್ಧರಾಗಿ! ಅನ್ವೇಷಿಸಲು ಇದು ಸಮಯ!
- ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡನ್ನು ಹಾಡುವುದರ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಖ್ಯಾತ ಗಾಯಕಿ ದೀಪ್ತಿ ಸುರೇಶ್* .
